ಬೀದರ್‌ನಲ್ಲಿ ಪಾರುಪತ್ಯ ಸಾಧಿಸಿದ ಕಾಂಗ್ರೆಸ್

Advertisement

ಬೆಂಗಳೂರು: ಬೀದರ ಬದಲಾವಣೆಯ ಆಶಯಕ್ಕೆ ಸಂದ ಜಯವಾಗಿದೆ ಎಂದು ಕರ್ನಾಟಕ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಲೋಕಸಭಾ ಚುನಾವಣೆಯಲ್ಲಿ ಬೀದರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಯುವ ನಾಯಕ ಸಾಗರ ಈಶ್ವರ ಖಂಡ್ರೆ ಅವರನ್ನು ಗೆಲ್ಲಿಸಿದ ಬೀದರ ಮಹಾಜನತೆಗೆ ತುಂಬು ಹೃದಯದ ಧನ್ಯವಾದಗಳು
ಇದು ಬೀದರ ಬದಲಾವಣೆಯ ಆಶಯಕ್ಕೆ ಸಂದ ಜಯವಾಗಿದೆ. ಈ ಗೆಲುವು ಪ್ರಗತಿ ಪಥಕ್ಕೆ ಮುನ್ನುಡಿ ಬರೆಯಲಿದೆ. ನೀವು ನಮ್ಮ ಮೇಲೆ ವಿಶ್ವಾಸವಿಟ್ಟು ವಹಿಸಿರುವ ಜವಾಬ್ದಾರಿಯನ್ನು ನಿಷ್ಠೆಯಿಂದ ನಿಭಾಯಿಸುವೆವು, ನಿಮ್ಮೆಲ್ಲರ ಪ್ರೀತಿ, ಆಶೀರ್ವಾದ, ಬೆಂಬಲ ಸದಾ ಹೀಗೆ ಇರಲಿ. ಮತ್ತೊಮ್ಮೆ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.