ಮಣಿಕಂಠ ರಾಠೋಡ್ ವಿರುದ್ಧ ಗೋವಾದಲ್ಲಿ ದೂರು ದಾಖಲು

Advertisement

ಗೋವಾ(ಪಣಜಿ): ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬವನ್ನು ಕೊಲ್ಲಲು ಕರ್ನಾಟಕದ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಅವರು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಗೋವಾ ಪ್ರದೇಶ ಕಾಂಗ್ರೆಸ್ ದೂರು ದಾಖಲಿಸಿದೆ. ಮಣಿಕಾಂತ್ ವಿರುದ್ಧ ಸೂಕ್ತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದೆ.
ಗೋವಾ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಪಾಟ್ಕರ್ ಮತ್ತು ಅವರ ನಿಯೋಗ ಪಣಜಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದವರ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಪ್ರಧಾನಿ ಮತ್ತು ಬಿಜೆಪಿಯ ಪ್ರಮುಖ ನಾಯಕರು ಮೌನವಾಗಿದ್ದಾರೆ. ಆಡಿಯೋ ಕ್ಲಿಪ್‌ನಲ್ಲಿ, ಬಿಜೆಪಿ ಅಭ್ಯರ್ಥಿ ಮಣಿಕಾಂತ್ ರಾಠೋಡ್ ಕೊಲೆಯ ಸಂಚಿನ ಬಗ್ಗೆ ಮಾತನಾಡುವುದನ್ನು ಸ್ಪಷ್ಟವಾಗಿ ಕೇಳಬಹುದು. ಈ ಬಗ್ಗೆ ಪೊಲೀಸರು ಗಮನಹರಿಸಿ ಮಣಿಕಂಠ ರಾಠೋಡ್ ವಿರುದ್ಧ ಸೂಕ್ತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಏತನ್ಮಧ್ಯೆ, ಬಿಜೆಪಿ ಈ ಆರೋಪಗಳನ್ನು ನಿರಾಕರಿಸಿದ್ದು, ಅವು ಸ್ಪಷ್ಟವಾಗಿ ಸುಳ್ಳು ಎಂದು ಹೇಳಿದೆ. ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಆಡಿಯೋ ಕ್ಲಿಪ್‌ಗಳು ನಕಲಿ ಎಂದು ಮಣಿಕಂಠ ರಾಠೋಡ್ ಹೇಳಿದ್ದಾರೆ.