ಮಳವಳ್ಳಿಯಲ್ಲಿ ಅತ್ಯಾಚಾರ, ಹತ್ಯೆ: ಬಾಲಕಿ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ

cm
Advertisement

ಮಂಡ್ಯ: ಮಳವಳ್ಳಿಯಲ್ಲಿ ಇತ್ತೀಚೆಗೆ ಅತ್ಯಚಾರಕ್ಕೆ ಒಳಗಾಗಿ ಮೃತಪಟ್ಟ ಬಾಲಕಿಯ ಕುಟುಂಬದವರಿಗೆ ರೂ. 10 ಲಕ್ಷ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಮಲೆಮಹಾದೇಶ್ವರ ಕುಂಭಮೇಳದ ಸಾಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಳವಳ್ಳಿ ಘಟನೆ ಬಗ್ಗೆ ಎಲ್ಲರೂ ದಿಗ್ಭ್ರಮೆ ವ್ಯಕ್ತಪಡಿಸಿದ್ದಾರೆ. ಸಮಾಜದಲ್ಲಿ ಎಂದಿಗೂ ಇಂಥದ್ದು ನಡೆಯಬಾರದು. ಅತ್ಯಂತ ಅಮಾನುಷ ಕೃತ್ಯವಿದು. ಮನುಷ್ಯತ್ವವಿಲ್ಲದವರು ಮಾತ್ರ ಇಂಥ ಕೆಲಸ ಮಾಡಲು ಸಾಧ್ಯ. ಇದನ್ನು ಶಬ್ದಗಳಲ್ಲಿ ಖಂಡಿಸಲಾಗದು. ಅರಿಯದ ಕಂದಮ್ಮನ ಪರಿಸ್ಥಿತಿ ಕೇಳಿದರೆ ಕರಳು ಕಿವುಚಿಬರುತ್ತದೆ. ಈಗಾಗಲೇ ಅಧಿಕಾರಿಗಳು ಕ್ರಮ ತೆಗೆದುಕೊಂಡು ಅಪರಾಧಿಯನ್ನು ಬಂಧಿಸಲಾಗಿದೆ. ಎಲ್ಲ 302, 307, ಪೋಕ್ಸೋ ಸೆಕ್ಷನ್‌ಗಳನ್ನು ಹಾಕಿದ್ದಾರೆ. ನಮ್ಮ ಪೊಲೀಸ್ ಮಹಾನಿರ್ದೇಶಕರಿಗೆ ಅಂದೇ ಸೂಚನೆ ನೀಡಿ ಕೂಡಲೇ ತನಿಖೆಯಾಗಿ ತಪ್ಪಿತಸ್ಥರನ್ನು ಶಿಕ್ಷೆಗೊಳಪಡಿಸಬೇಕೆಂದು ಸೂಚಿಸಿದ್ದೆ. ಅವರು ಎಫ್ಎಸ್ಎಲ್ ವರದಿ ಒಂದು ವಾರದಲ್ಲಿಯೇ ನೀಡಲಾಗುವುದೆಂದು ಹೇಳಿದ್ದು, ಬಂದ ಕೂಡಲೇ ಆರೋಪ ಪಟ್ಟಿ ಸಿದ್ಧಪಡಿಸಿ ಪೋಕ್ಸೋ ನ್ಯಾಯಾಲಯಕ್ಕೆ ಕಳುಹಿಸಿ, ಆದಷ್ಟು ಬೇಗ ನ್ಯಾಯ ನೀಡಲು ಕ್ರಮ ಕೈಗೊಂಡು ಇನ್ನೊಮ್ಮೆ ಹೀಗಾದರೆ ಅತಿ ಕಡಿಮೆ ಸಮಯದಲ್ಲಿ ಉಗ್ರ ಶಿಕ್ಷೆ ಈ ವ್ಯವಸ್ಥೆ ನೀಡಲಿದೆ ಎಂಬ ಸಂದೇಶವನ್ನು ಸಾರಲಾಗುವುದೆಂದು ಈ ಪ್ರಕರಣದಲ್ಲಿ ಸಾಬೀತು ಮಾಡುತ್ತೇವೆ ಎಂದರು.