ಮಹದಾಯಿ ವಿಚಾರದಲ್ಲಿ ಪ್ರತಿ ಪಕ್ಷಗಳು ಅನಗತ್ಯ ಗೊಂದಲ ಸೃಷ್ಟಿ

Advertisement

ಹುಬ್ಬಳ್ಳಿ : ಮಹದಾಯಿ ವಿಚಾರದಲ್ಲಿ ಪ್ರತಿಪಕ್ಷಗಳಿಂದ ಅನಗತ್ಯ ಗೊಂದಲ ಸೃಷ್ಟಿ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಇಲ್ಲಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಹದಾಯಿ ಡಿಪಿಆರ್ ಆದೇಶ ಕೆಳಗಡೆ ಸಹಿ ಇದೆ. ಕಾಂಗ್ರೆಸ್ ಯಾವ ಉದ್ದೇಶಕ್ಕೆ ಆರೋಪಿಸುತ್ತಿದೆ ಗೊತ್ತಿಲ್ಲ. ಮಹದಾಯಿಗಾಗಿ ನಾವು ಹೋರಾಟ ಮಾಡಿದ್ವಿ, ಅವರು ಹೋರಾಟ ಮಾಡಿದ್ದರು. ಈಗ ಆ ಹೋರಾಟಕ್ಕೆ ತಾರ್ಕಿಕ ಜಯ ಸಿಕ್ಕಿದೆ. 20 – 25 ವರ್ಷ ಹೋರಾಟಕ್ಕೆ ಫಲ ಸಿಕ್ಕಿದೆ. ಇಂತಹ ಸಂದರ್ಭಗಳಲ್ಲಿ ಲೋಪದೋಷ ಹುಡುಕುವುದು ಅವರ ಮನಸ್ಥಿತಿ ಸೂಚಿಸುತ್ತದೆ. ವಅವರ ಟೀಕೆ ಟಿಪ್ಪಣಿಗಳ ಬಗ್ಗೆ ತಲೆಕಡೆಸಿಕೊಳ್ಳುವುದಿಲ್ಲ. ಡಿಪಿಆರ್ ಆಗಿದೆ – ಎಂಓಎಫ್ ಕ್ಲಿಯರೆನ್ಸ್ ತೆಗೆದುಕೊಂಡು ಟೆಂಡರ್ ಕರೆದು ಕಾಮಗಾರಿ ಆರಂಭಿಸುತ್ತವೆ ಎಂದರು.
ಪಂಚಮಸಾಲಿ- ಒಕ್ಕಲಿಗ ಮೀಸಲಾತಿ ಹೆಚ್ಚಳ ವಿಚಾರ ಸಂವಿಧಾನಾತ್ಮಕವಾಗಿ ಯಾವುದೇ ತೊಡಕು ಆಗುವುದಿಲ್ಲ. ಇದು‌ ಮಧ್ಯಂತರ ವರದಿ ಇದೆ, ಅಂತಿಮ ಆದೇಶದಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಇದರಲ್ಲಿ ನಮ್ಮ ಸರ್ಕಾರ ಉದ್ದೇಶ ಹೇಳಿದ್ದೇವೆ. ಅಂತಿಮ ವರದಿಯಲ್ಲಿ ಅಂಕಿ – ಅಂಶಗಳ ಮಾಹಿತಿ ನೀಡುತ್ತೇವೆ. ಮೀಸಲಾತಿ ಜಾರಿ ವಿಚಾರದಲ್ಲಿ ಸಂಬಂಧ ಪಟ್ಟವರ ಜೊತೆ ಚರ್ಚಿಸಲಾಗುವುದು. ಯಾವುದೇ ಕಾರಣಕ್ಕೂ ಹಿಂದುಳಿದ ವರ್ಗದವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ.ಕೆಲ ವರ್ಗದ ಜನರಿಗೆ ಶೈಕ್ಷಣಿಕ- ಉದ್ಯೋಗದಲ್ಲಿ ಹಿನ್ನಡೆಯಾಗಿದ್ದು ನಿಜ ಅವರಿಗೆ ನ್ಯಾಯಕೊಡುವ ನಿಟ್ಟಿನಲ್ಲಿ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಇದಕ್ಕೆ ಸ್ಪಷ್ಟೀಕರಣ ಬೇಕಾದರೆ ಕೊಡುತ್ತೇವೆ. ಇದರಲ್ಲಿ ಯಾರಿಗೂ ಅನ್ಯಾಯ ಮಾಡುವ ಪ್ರಶ್ನೆಯಿಲ್ಲ. ವಿರೋಧ ಪಕ್ಷದವರು ತಾವು ಅಧಿಕಾರದಲ್ಲಿ ಇದ್ದಾಗ ಈ ಬೇಡಿಕೆ ಈಡೇರಿಸಲು ಆಗಲಿಲ್ಲ. ಈಗ ನಾವು ಮಾಡುತ್ತಿರುವುದರಿಂದಾವರಿಗೆ ಸಮಸ್ಯೆಯಾಗಿದೆ ಎಂದು ಹೇಳಿದರು.