ಮಹಾಲಿಂಗೇಶ್ವನ ಮೊರೆ ಹೋದ ಪುತ್ತೂರು ಶಾಸಕರು

Advertisement

ಮಂಗಳೂರು: ಮಹಿಳೆಯೊಬ್ಬರ ಜತೆ ಇರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಪುತ್ತೂರಿನ ಹಾಲಿ ಶಾಸಕ ಸಂಜೀವ ಮಠಂದೂರು ಅವರು ತನ್ನ ವಿರುದ್ಧ ಅಪಪ್ರಚಾರ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಪುತ್ತೂರಿನ ಕಾರ್ಣಿಕ ಕ್ಷೇತ್ರವಾಗಿರುವ ಮಹಾಲಿಂಗೇಶ್ವರನ ಮೊರೆ ಹೋಗಲು ನಿರ್ಧರಿಸಿದ್ದಾರೆ.
ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿರುವ ವ್ಯಕ್ತಿಗಳನ್ನು ನಾನು ನಂಬಿದ ದೇವರೇ ನೋಡಿಕೊಳ್ಳಬೇಕು ಎಂದು ಮಠಂದೂರು ಪ್ರಾರ್ಥನೆ ಮಾಡಿಕೊಂಡಿದ್ದಾರೆ. ಸ್ವತಃ ಪತ್ರಿಕಾ ಪ್ರಕಟಣೆ ಹೊರಡಿಸಿ ಮಠಂದೂರು ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.
‘ನಾನು ಪುತ್ತೂರಿನಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಜನ ಸೇವೆಯೇ ಜನಾರ್ಧನ ಸೇವೆ ಅಂದುಕೊಂಡು ಕೆಲಸ ಮಾಡಿದ್ದೇನೆ. ಕೋಟ್ಯಂತರ ರೂ. ಅನುದಾನ ತರಿಸಿದ್ದೇನೆ. ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ನನ್ನ ಶಕ್ತಿ ಮೀರಿ ಕೆಲಸ ಮಾಡಿದ್ದೇನೆ. ಧಾರ್ಮಿಕ ಅಥವಾ ಸಾಮಾಜಿಕವಾಗಿ ನನ್ನನ್ನು ನಾನು ಹೆಚ್ಚು ತೊಡಗಿಸಿಕೊಂಡಿದ್ದೇನೆ. ಆದರೆ ಕೆಲವರು ನನ್ನನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ಮಾಡಿದ್ದಾರೆ. ಅಂಥಹವರ ವಿರುದ್ಧ ನಾನು ದೇವರ ಮೊರೆ ಹೋಗಿದ್ದೇನೆ. ನಾನು ನಂಬಿದ ಪುತ್ತೂರಿನ ಮಹಾಲಿಂಗೇಶ್ವರ ದೇವರೇ ಅವರಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಪ್ರಾರ್ಥಿಸಿದ್ದಾರೆ.