ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು ಅನಾರೋಗ್ಯ ಹಿನ್ನಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಇಂದು ದಾಖಲಾಗಿದ್ದಾರೆ.
ಕಾಲು ನೋವಿನ ತೊಂದರೆಯಿಂದಾಗಿ ಅವರು ಜನರಲ್ ಚೆಕಪ್ಗೆಂದು ಆಸ್ಪತ್ರೆಗೆ ಹೋಗಿದ್ದರು. ಈ ಸಂದರ್ಭ ವೈದ್ಯರು ಪರಿಶೀಲಿಸಿ ಒಂದು ವಾರದ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ.
ದೇವೇಗೌಡರ ಆರೋಗ್ಯ ಕುರಿತು ಮಾತನಾಡಿರುವ ಸಿ.ಎಂ. ಇಬ್ರಾಹಿಂ, ಮಂಡಿ ನೋವಿಗೆಂದು ತಪಾಸಣೆಗಾಗಿ ಅವರು ಆಸ್ಪತ್ರೆಗೆ ಹೋಗಿದ್ದಾರೆ. ಮನೆಯಲ್ಲಿ ಅವರಿಗೆ ಸರಿಯಾದ ವಿಶ್ರಾಂತಿ ದೊರೆಯುತ್ತಿಲ್ಲ ಹೀಗಾಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.