ಮುರುಘಾ ಶ್ರೀಗಳಿಗೆ ಎದೆ ನೋವು:ಜಿಲ್ಲಾಸ್ಪತ್ರೆಗೆ ದಾಖಲು

Advertisement

ಚಿತ್ರದುರ್ಗ: ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಲ್ಲಿ ಕಳೆದ ರಾತ್ರಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶ್ರೀಗಳಿಗೆ ಜೈಲಿನಲ್ಲಿ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ, ತಕ್ಷಣವೇ ಅವರನ್ನು ಪೊಲೀಸರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಮುರುಘಾ ಶ್ರೀಗಳಿಗೆ ಎದೆ ನೋವು: ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲುಇಂದು ಬೆಳಗ್ಗೆ ಶ್ರೀಗಳ ಆರೋಗ್ಯದಲ್ಲಿ ಏಕಾಏಕಿ ವ್ಯತ್ಯಾಸ ಕಾಣಿಸಿಕೊಂಡಿದೆ. ಹೀಗಾಗಿ, ಜೈಲು ಸಿಬ್ಬಂದಿ ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ಕರೆತಂದರು. ಬೆಳಗ್ಗೆ ಜೈಲು ಸಿಬ್ಬಂದಿ ಮಾತ್ರೆ ಹಾಗೂ ಟೂತ್​ ಬ್ರೆಷ್​​, ಬಟ್ಟೆ ನೀಡಿದ್ದಾರೆ. ಇದಾದ ಕೆಲಹೊತ್ತಿನ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ತಡರಾತ್ರಿ 3 ಗಂಟೆಗೆ ಅವರು ಜೈಲಿಗೆ ಬಂದಿದ್ದು ಸರಿಯಾಗಿ ನಿದ್ದೆ ಮಾಡಿರಲಿಲ್ಲ ಎಂದು ತಿಳಿದುಬಂದಿದೆ.