ಮುರುಘಾ ಶ್ರೀಗಳ ಆರೋಪದ ಹಿಂದೆ ಷಡ್ಯಂತ್ರ: ಸತೀಶ ಜಾರಕಿಹೊಳಿ

ಸತೀಶ ಜಾರಕಿಹೊಳಿ
Advertisement

ಮುರುಘಾ ಮಠದ ಶ್ರೀಗಳ ಮೇಲೆ ಮಾಡಿರುವ ಆರೋಪ ಷಡ್ಯಂತ್ರದಿಂದ ಕೂಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಮೈಸೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆಯ ಅಗತ್ಯವಿದೆ. ಬಳಿಕವಷ್ಟೇ ಸತ್ಯಾಸತ್ಯತೆ ತಿಳಿಯಲಿದೆ ಎಂದರು. ಇನ್ನು ಮಹದಾಯಿ ಸೇರಿದಂತೆ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಪಕ್ಷದಿಂದ ದೊಡ್ಡ ಮಟ್ಟದಲ್ಲಿ ಪಾದಯಾತ್ರೆ ನಡೆಸಲು ಯೋಜಿಸಲಾಗಿದೆ ಎಂದು ತಿಳಿಸಿದರು.