ಮೋಸ ಮತ್ತು ದ್ರೋಹ ಬಿಜೆಪಿಯ ಡಿಎನ್‌ಎಯಲ್ಲಿದೆ: ಸಿದ್ದರಾಮಯ್ಯ

Advertisement

ಮೋಸ ಮತ್ತು ದ್ರೋಹ ಬಿಜೆಪಿಯ ಡಿಎನ್‌ಎಯಲ್ಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ, ಇತ್ತಿಚೆಗೆ ಸಿದ್ದರಾಮಯ್ಯ ಅವರು ಪ್ರತಿಯೊಬ್ಬರಿಗೆ 500 ಕೊಟ್ಟು ಕರೆದುಕೊಂಡು ಬರಬೇಕು ಎಂದು ಹೇಳಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಈ ಕುರಿತು ಇಂದು ಸರಣಿ ಟ್ವೀಟ್‌ ಮಾಡುವ ಮೂಲಕ ಪ್ರತಿಕ್ರಿಯಿಸಿದ ಅವರು ಬಿಜೆಪಿಯವರು 500 ರೂಪಾಯಿ ಕೊಟ್ಟು ಜನ ಕರೆದುಕೊಂಡು ಬರುತ್ತಾರೆ’’ ಎಂದು ನಾನು ಹೇಳಿದ್ದನ್ನು ತಿರುಚಿ, ಬಿಜೆಪಿಯವರು ಅವರು ಮಾಡಿರುವ ಪಾಪಕೃತ್ಯವನ್ನು ನನ್ನ ತಲೆಗೆ ಕಟ್ಟುವ ಪ್ರಯತ್ನ ಮಾಡಿದ್ದಾರೆ. ಸುಳ್ಳು, ಮೋಸ ಮತ್ತು ದ್ರೋಹ ಬಿಜೆಪಿಯ ಡಿಎನ್‌ಎಯಲ್ಲಿದೆ. ನನ್ನ ಹೇಳಿಕೆಯ ವಿಡಿಯೋಗಳನ್ನು ತಿರುಚಿ ಈ ರೀತಿ ಅಪಪ್ರಚಾರ ಮಾಡುತ್ತಿರುವುದು ಇದು ಮೊದಲ ಬಾರಿ ಅಲ್ಲ, ಹಿಂದೆ ಕೆಲವು ಬಾರಿ ನಡೆದಿದೆ, ಚುನಾವಣೆ ಹತ್ತಿರವಾಗುತ್ತಿದ್ದಂತೆ ಇನ್ನು ಹಲವು ಬಾರಿ ನಡೆಯಬಹುದು. ಇಂತಹ ಸುಳ್ಳುಗಳನ್ನು ಸೃಷ್ಟಿಸಲು ಬಿಜೆಪಿಯವರು ದೊಡ್ಡ ದೊಡ್ಡ ಫ್ಯಾಕ್ಟರಿಗಳನ್ನೇ ತೆಗೆದಿದ್ದಾರೆ. ಇಂತಹ ನಕಲಿ ವಿಡಿಯೋಗಳಿಗೆ ಬಲಿಬೀಳದೆ ಜನರು ಎಚ್ಚರಿಕೆಯಿಂದ ಇರಬೇಕು ಮತ್ತು ನಕಲಿ ವಿಡಿಯೋಗಳನ್ನು ರಚಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಪುಂಡರನ್ನು ನಮ್ಮ ಪಕ್ಷದ ಬೆಂಬಲಿಗರು ಮತ್ತು ಕಾರ್ಯಕರ್ತರು ಹುಡುಕಿ ಪೊಲೀಸರಿಗೆ ದೂರು ನೀಡಬೇಕು, ಈ ರೀತಿಯ ನಕಲಿ ವಿಡಿಯೋ-ಅಡಿಯೋ ಮೂಲಕ ಅಪಪ್ರಚಾರ ಮಾಡಿ ನನ್ನ ತೇಜೋವಧೆ ಮಾಡಬಹುದು ಎಂದು ಭಾವಿಸಿದ್ದರೆ ಅದು ಭ್ರಮೆ. ನಲ್ವತ್ತು ವರ್ಷಗಳ ನನ್ನ ರಾಜಕಾರಣವನ್ನು ರಾಜ್ಯದ ಜನ ನೋಡಿದ್ದಾರೆ. ಸರಿ-ತಪ್ಪು, ಸತ್ಯ-ಸುಳ್ಳುಗಳನ್ನು ಅರ್ಥಮಾಡಿಕೊಳ್ಳುವಷ್ಟು ಅವರು ಪ್ರಜ್ಞಾವಂತರಿದ್ದಾರೆ. ಹಣ, ಹೆಂಡ ಹಂಚಿ ಕಾರ್ಯಕ್ರಮಕ್ಕೆ ಜನ ಕರೆತಂದ ಕೂಡಲೆ ಅವೆಲ್ಲ ಮತಗಳಾಗುವುದಿಲ್ಲ, ಚುನಾವಣೆ ಗೆಲ್ಲಲೂ ಆಗಲ್ಲ. ಪ್ರೀತಿ-ವಿಶ್ವಾಸದಿಂದ ಬರುವ 10 ಜನ ಸೇರಿದರೂ ಆ ಹತ್ತೇ ಜನಕ್ಕೆ ಭಾಷಣ ಮಾಡುವವನು ನಾನು. ಇದು ನಾನು ರಾಜಕೀಯದಲ್ಲಿ ರೂಢಿಸಿಕೊಂಡು ಬಂದಿರುವ ಅಭ್ಯಾಸ. ಎಂದು ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.