ಯಲ್ಲಮ್ಮ ಯಾತ್ರಾರ್ಥಿಗಳ ದುರ್ಮರಣ: ೫ ಜನ‌ ಸಾವು

Advertisement

ಬೆಳಗಾವಿ: ಸವದತ್ತಿ ಯಲ್ಲಮ್ಮನ ಯಾತ್ರಾರ್ಥಿಗಳು ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ರಾಮದುರ್ಗ ತಾಲುಕಿನ ಕಟಕೊಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ‌ ೫ ಜನ‌ಮೃತಪಟ್ಟಿದ್ದಾರೆ. ಒಬ್ಬರು ಗಾಯಗೊಂಡಿದ್ದಾರೆ. ಯಾತ್ರಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ವಾಹನ ಮರಕ್ಕೆ ಡಿಕ್ಕಿ ಹೊಡೆದಾಗ ಈ ಘಟನೆ ಸಂಭವಿಸಿದೆ.