ಯಾಕೆ ಬ್ರಾಹ್ಮಣರು ಸಿಎಂ ಆಗಬಾರದು..? ಪೇಜಾವರ ಶ್ರೀ ಪ್ರಶ್ನೆ

ಪೇಜಾವರ ಶ್ರೀ
Advertisement

ಬ್ರಾಹ್ಮಣರು ಮುಖ್ಯಮಂತ್ರಿ ಆಗೋದಾದರೆ ಆಗಲಿ. ಯಾಕೆ ಬ್ರಾಹ್ಮಣರು ಸಿಎಂ ಆಗಬಾರದು..? ಎಂದು ಪೇಜಾವರ ಶ್ರೀ ಪ್ರಶ್ನಿಸಿದ್ದಾರೆ.
ಮಂಡ್ಯದ ಮದ್ದೂರಿನ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆಗೆ ಬೇಸರ ವ್ಯಕ್ತಪಡಿಸಿದ್ದು, ಯಾಕೆ ಬ್ರಾಹ್ಮಣ ಸಮುದಾಯದವರು ಸಿಎಂ ಆಗಬಾರದಾ?. ಎಂದು ಕೇಳಿದ್ದಾರೆ.
ಹಿಂದಿನಿಂದಲೂ ಬ್ರಾಹ್ಮಣರ ವಿರುದ್ಧದ ಹೇಳಿಕೆಗಳು ಕೇಳಿ ಬರುತ್ತಿವೆ. ಬ್ರಾಹ್ಮಣರು ಯಾರೂ ಧ್ವನಿ ಎತ್ತಿ ಮಾತನಾಡುವವರು ಇಲ್ಲ, ಸಂಖ್ಯಾಬಲ ಇಲ್ಲ, ಅಲ್ಪಸಂಖ್ಯಾತರು ಇದ್ದಾರೆ. ಆದ್ದರಿಂದ ಏನು ಮಾತನಾಡಿದರೂ ನಡೆಯತ್ತೆ ಎಂಬ ಭಾವನೆ ಇದೆ. ಆದರೆ, ಮಾತನಾಡವಾಗ ಹಿನ್ನೆಲೆ ಅಥವಾ ಪುರಾವೆ ಇಟ್ಟುಕೊಂಡು ಮಾತನಾಡಬೇಕು ಎಂದರು.