ಯಾವುದೇ ಕಾರಣಕ್ಕೂ ನಾನು
ಬಿಜೆಪಿ ತೊರೆಯಲ್ಲ

Advertisement

ಬೆಳಗಾವಿ : ನಾನು ಯಾವುದೇ ಕಾರಣಕ್ಕೂ ಬಿಜೆಪಿಯನ್ನು ತೊರೆಯುವ ಪ್ರಶ್ನೆ ಉದ್ಭವಿಸುದಿಲ್ಲ. ಬೇರೆಯವರ ಬಗ್ಗೆ ನನಗೆ ಗೊತ್ತಿಲ್ಲ ಎಂದು ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಯಾವೊಬ್ಬ ನಾಯಕರು ಬಿಜೆಪಿಯನ್ನು ಬಿಡುವುದಿಲ್ಲ. ಬಿಜೆಪಿಯಿಂದ ರಾಜ್ಯ ಮತ್ತು ದೇಶಕ್ಕೆ ಹಿತವಿದೆ. ಇನ್ನು 20 ವರ್ಷ ಬಿಜೆಪಿಯನ್ನು ಅಲುಗಾಡಿಸಲು ಯಾರಿಂದಲೂ ಆಗುವುದಿಲ್ಲ. ಕಾಂಗ್ರೆಸ್ ಕರ್ನಾಟಕದಲ್ಲಿ ಮಾತ್ರ ಉಸಿರಾಡುತ್ತಿದ್ದು ಅದಕ್ಕೆ ಭವಿಷ್ಯ ಇಲ್ಲ ಎಂದು ಹೇಳಿದರು.
ಇನ್ನು ನನ್ನ ಸಕ್ಕರೆ ಕಾರ್ಖಾನೆಯನ್ನು ಪುತ್ರ ನೋಡಿಕೊಳ್ಳುತ್ತಿದ್ದು, ಸಾಲ ಬಾಕಿ ಬಗ್ಗೆ ಯಾವ ತನಿಖೆ ನಡೆಸಿದರೂ ನನ್ನ ಮಗ ಉತ್ತರ ಕೊಡುತ್ತಾನೆ ಎಂದರು.
ಬಾಂಬೆ ಬಾಯ್ಸ್ ಸಿಡಿ ಬಿಡುಗಡೆ ಬಗ್ಗೆ ಕೇಳಿದ ಪ್ರಶ್ನೆ ಸಿಡಿ ಹೆಸರಲ್ಲಿ ಬ್ಲಾಕ್ ಮೇಲ್ ಮಾಡುವವರಿಗೆ ರಾಜ್ಯದ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂದು ರಮೇಶ ಜಾರಕಿಹೊಳಿ ತಿರುಗೇಟು ನೀಡಿದರು.
ಸಚಿವ ಸ್ಥಾನ ಕೊಡೋದು ಬಿಡೋದು ಹೈ ಕಮಾಂಡ್ ಮತ್ತು ಮುಖ್ಯಮಂತ್ರಿಯವರಿಗೆ ಬಿಟ್ಟ ವಿಚಾರ. ನಾನಂತು ಕಳೆದ ಎರಡು ತಿಂಗಳಿನಿಂದ ಪಕ್ಷದ ಅಭ್ಯರ್ಥಿ ಗೆಲುವಿಗೆ ರೂಪುರೇಷೆ ಸಿದ್ಧಪಡಿಸಿ, ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದೇನೆ ಎಂದರು.