ರಾಜಕೀಯದಿಂದ ಮುಕ್ತಿ, ಆಟದ ಕಡೆಗೆ ಆಸಕ್ತಿ…

Advertisement

ನವದೆಹಲಿ: ರಾಜಕೀಯ ಕರ್ತವ್ಯಗಳಿಂದ ಮುಕ್ತಿ ಪಡೆದು ಕ್ರೀಡೆಯತ್ತ ತಮ್ಮ ಗಮನ ಕೇಂದ್ರೀಕರಿಸುತ್ತೇನೆ ಎಂದು ಕ್ರಿಕೆಟಿಗ‌, ಬಿಜೆಪಿ ಸಂಸದ ಗೌತಮ್ ಗಂಭೀರ್ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಪಕ್ಷದ ಅಧ್ಯಕ್ಷ ಜೆ ಪಿ ನಡ್ಡಾ ಅವರಿಗೆ ಮನವಿ ಮಾಡಿದ್ದಾರೆ ನನ್ನ ರಾಜಕೀಯ ಕರ್ತವ್ಯಗಳಿಂದ ದೂರಸರಿದು ನಾನು ನನ್ನ ಮುಂಬರುವ ಕ್ರಿಕೆಟ್ ಆಟಗಳ ಕಡೆಗೆ ಗಮನ ಕೇಂದ್ರೀಕರಿಸಬಹುದು.
ಇಲ್ಲಿಯವರಿಗೆ ಜನರ ಸೇವೆ ಮಾಡಲು ನನಗೆ ಅವಕಾಶ ನೀಡಿದ್ದಕ್ಕಾಗಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್‌ ಶಾ ಅವರಿಗೆ ಹೃತ್ಪೂರ್ವಕವಾಗಿ ಧನ್ಯವಾದಗಳು ತಿಳಿಸಿದ್ದಾರೆ.