ರಾಜ್ಯದಲ್ಲಿ ಕಾಂಗ್ರೆಸ್‌ ಉಳಿಯಲು ಸಾಧ್ಯವಿಲ್ಲ-ಸಚಿವ ಗೋವಿಂದ ಕಾರಜೋಳ

Advertisement

ಬೆಂಗಳೂರು: ಸಿದ್ದರಾಮಯ್ಯನವರು ಮೂಲತಃ ರಾಜಕಾರಣಕ್ಕೆ ಬಂದದ್ದು ಕಾಂಗ್ರೆಸ್‌ ವಿರೋಧಿಯಾಗಿ. ಅವರು ಜನತಾ ಪಕ್ಷದಿಂದ ರಾಜಕೀಯಕ್ಕೆ ಬಂದವರು. ಅಂಥವರು ಕಾಂಗ್ರೆಸ್‌ನ ತತ್ವ-ಸಿದ್ಧಾಂತ ಮೈಗೂಡಿಸಿಕೊಳ್ಳಲು ಸಾಧ್ಯವಿಲ್ಲ. ಒತ್ತಾಯದಿಂದ ನೀವು ಕಾಂಗ್ರೆಸ್‌ ಬಗ್ಗೆ ಮಾತನಾಡುತ್ತೀರಿ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್‌ ಉಳಿಯಲು ಸಾಧ್ಯವಿಲ್ಲ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.
ಹಿಮಾಚಲ ಪ್ರದೇಶದಲ್ಲಿ ಬೇರೆ ಬೇರೆ ಪಕ್ಷವನ್ನು ಆಯ್ಕೆ ಮಾಡುವುದು ಅಲ್ಲಿ ಜನರ ಸಂಪ್ರದಾಯವಾಗಿದೆ. ಅಲ್ಲಿನ ಜನರ ಮನಸ್ಥಿತಿಯನ್ನು ಬದಲಾಯಿಸಲು ಸಾಧ್ಯವಿಲ್ಲ. ಅಲ್ಲಿ ನಮ್ಮ ಪಕ್ಷಕ್ಕೆ ಅಂತಹ ಹಿನ್ನಡೆಯೇನೂ ಆಗಿಲ್ಲ ಎಂದರು.