ರಾಜ್ಯದ ದುರಾಡಳಿತದ ವಿರುದ್ಧ ಜನ ದಂಗೆ ಏಳಬೇಕು

Advertisement

ಮಂಡ್ಯ: ರಾಜ್ಯದಲ್ಲಿ ಆಡಳಿತದ ವಿರೋಧ ಪಕ್ಷಗಳಾಗಿರುವ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಕೇವಲ ಪ್ರತಿಭಟನೆ ಅಥವಾ ರಸ್ತೆ ತಡೆ ಮಾಡುವ ಬದಲಿಗೆ ಕಾಂಗ್ರೆಸ್ ಸರ್ಕಾರದ ದುರಾಡಳಿತ ವಿರುದ್ಧ ರಾಜ್ಯದ ಜನತೆ ದಂಗೆ ಏಳಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕರೆ ನೀಡಿದರು.
ಕೇಂದ್ರ ಸಚಿವರಾಗಿ ಪದಗ್ರಹಣದ ನಂತರ ಇದೇ ಮೊದಲಿಗೆ ತಾಲ್ಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಭೇಟಿ ನೀಡಿದ್ದ ಹೆಚ್‌ಡಿಕೆ, ಶ್ರೀ ಕಾಲಭೈರವೇಶ್ವರಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಗ್ಯಾರಂಟಿ ಯೋಜನೆಗಳನ್ನು ಮುಂದುವರಿಸುವ ಉದ್ದೇಶದಿಂದ ಬೆಲೆ ಏರಿಕೆ ಮಾಡಿರುವುದನ್ನು ರಾಜ್ಯ ಸರ್ಕಾರದ ಸಚಿವರೇ ಒಪ್ಪಿಕೊಂಡಿದ್ದಾರೆ. ಜನರಿಂದ ವಸೂಲು ಮಾಡುವ ಹಣವನ್ನು ಅದೇ ಜನರಿಗೆ ಕೊಡಲು ಮುಂದಾಗಿರುವುದು ಸರಿಯಲ್ಲ ಎಂದರು.