ಬೆಂಗಳೂರು : ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಸಂಘಟನೆ ಸರ್ಕಸ್ ಮಾಡಲಾಗುತ್ತಿದ್ದು, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಕಚೇರಿಯಲ್ಲಿ ಮಹತ್ವದ ಮೀಟಿಂಗ್ ನಡೆಸಲಾಗಿದೆ.
ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಸೇರಿ ಹಲವರು ಭಾಗಿಯಾಗಿದ್ದು, ಚುನಾವಣೆಗೆ ಪಕ್ಷ ಸಂಘಟಿಸುವ ಸಂಬಂಧ ಚರ್ಚೆ ನಡೆಸಲಾಗಿದೆ. ಸಚಿವರಾದ ಕೆ.ಗೋಪಾಲಯ್ಯ, ಭೈರತಿ ಬಸವರಾಜ್ ಎಸ್.ಟಿ.ಸೋಮಶೇಖರ್, ಡಾ.ಅಶ್ವತ್ ನಾರಾಯಣ್, ಮುನಿರತ್ನ ಸೇರಿ ಹಲವರು ಸಚಿವರು, ಮುಖಂಡರು ಭಾಗಿಯಾಗಿದ್ದಾರೆ. ಮೈಸೂರಿನಲ್ಲಿ ಎಸ್ಟಿ ಸಮಾವೇಶ ಮಾಡಲು ತೀರ್ಮಾನಿಸಲಾಗಿದೆ.