ರಾಮನ ಜನಾನುರಾಗ ಸಿದ್ದರಾಮಯ್ಯನವರು ಸಹ ಪಡೆಯಲಿ

Advertisement

ರಾಯಚೂರು: ರಾಮ ಎಲ್ಲ ರೀತಿಯಿಂದಲೂ ಅನುಕರಣೀಯ ಹಾಗೂ ಆದರ್ಶ ವ್ಯಕ್ತಿ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ಹೇಳಿದ್ದಾರೆ.
ನೀನು ಹೇಗಿರಬೇಕು ಅಂತ ಹೇಳುವಾಗ ರಾಮನಂತೆ ನೀನು ಇರು ಅಂತ ದೃಷ್ಟಾಂತ ಎಲ್ಲರೂ ಕೊಡುತ್ತಾರೆ. ಯಾರೊಂದಿಗೂ ಹೋಲಿಕೆ ಸರಿಯಲ್ಲ ಸಿದ್ದರಾಮಯ್ಯನವರಿಗೂ ಒಳ್ಳೆಯದಾಗಲಿ ಎಂದರು. ರಾಮನ ಹೋಲಿಕೆಯನ್ನು ಇನ್ನೊಬ್ಬರಿಗೆ ಹೋಲಿಸುವಂತದ್ದಲ್ಲಾ, ರಾಮನ ಹೆಸರನ್ನ ಸಿದ್ದರಾಮಯ್ಯ ಇಟ್ಟುಕೊಂಡಿದ್ದಾರೆ. ಆದ್ದರಿಂದ ರಾಮನ ಆದರ್ಶ ಹಾಗೂ ರಾಮನ ಜನಾನುರಾಗ ಸಿದ್ದರಾಮಯ್ಯನವರು ಸಹ ಪಡೆಯಲಿ ಎಂದು ಆಶಿಸಿದರು.