ರಾಷ್ಟ್ರಪತಿಯವರಿಗೆ ವಿಮಾನ ನಿಲ್ದಾಣದಲ್ಲಿ ಗಣ್ಯರಿಂದ ಸ್ವಾಗತ

ರಾಷ್ಟ್ರಪತಿ
Advertisement

ಹುಬ್ಬಳ್ಳಿ: ನಗರದಲ್ಲಿ ಆಯೋಜಿಸಿರುವ ಪೌರಸನ್ಮಾನ ಹಾಗೂ ಧಾರವಾಡ ತಡಸಿನಕೊಪ್ಪದ ಐಐಐಟಿ ಉದ್ಘಾಟನೆಗೆ ಆಗಮಿಸಿರುವ ರಾಷ್ಟ್ರಪತಿಯವರಾದ ದ್ರೌಪದಿ ಮುರ್ಮು ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ, ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಷಿ, ಸಚಿವರಾದ ಹಾಲಪ್ಪ ಆಚಾರ, ಶಂಕರ ಪಾಟೀಲ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿ, ಶಾಸಕ ಜಗದೀಶ ಶೆಟ್ಟರ್, ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್, ಸಲೀಂ ಅಹ್ಮದ್, ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಮಹಾಪೌರ ಈರೇಶ ಅಂಚಟಗೇರಿ, ಸರ್ಕಾರದ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶಗ ಗೋಯಲ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಆಯುಕ್ತ ಲಾಭೂರಾಮ್ ಮತ್ತಿತರರು ಸ್ವಾಗತಿಸಿದರು.