`ರಾಹುಲ್ ಸ್ವಾಗತಕ್ಕೆ ಕುಂದಾನಗರಿ ಸಜ್ಜು’

ಬೆಳಗಾವಿ
Advertisement

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಭರ್ಜರಿ ರೋಡ್ ಶೋ ನಡೆಸಿ ಚುನಾವಣೆ ಕಹಳೆ ಮೊಳಗಿಸಿದ ಬೆಳಗಾವಿಗೆ ನಾಳೆ ದಿ. 20ರಂದು ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ.
ಮೋದಿ ಅವರ ಆಗಮನದಿಂದ ಬಿಜೆಪಿ ಪಾಳಯದಲ್ಲಿ ಎಲ್ಲಿಲ್ಲದ ಉತ್ಸಾಹ ಮೂಡಿತ್ತು. ಈಗ ರಾಹುಲ್ ಗಾಂಧಿ ಆಗಮನದಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿಯೂ ಹೊಸ ಹುಮ್ಮಸ್ಸು ಮೂಡುವ ಸಾಧ್ಯತೆಗಳಿವೆ.
ರಾಜ್ಯದಲ್ಲಿ ಬೆಂಗಳೂರನ್ನು ಬಿಟ್ಟರೆ ಅತೀ ಹೆಚ್ಚು ವಿಧಾನಸಭೆ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿಯತ್ತ ಕೈ ನಾಯಕರ ದೃಷ್ಟಿ ಬೀರಿದ್ದು ವಿಶೇಷವಾಗಿದೆ.
ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ ಬೆಳಗಾವಿ ಜಿಲ್ಲೆಯನ್ನು ಕೇಂದ್ರೀಕೃತವಾಗಿಸಿಕೊಂಡು ಚುನಾವಣೆ ರಣಕಹಳೆ ಮೊಳಗಿಸುತ್ತಿದೆ.
ಮಾ. 20ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾಂಬ್ರಾ ವಿಮಾನ ನಿಲ್ದಾಣದಿಂದ ನಗರಕ್ಕೆ ಆಗಮಿಸುವರು. ಅಂದು ಬೆಳಗ್ಗೆ 11ಗಂಟೆಗೆ ಸಿಪಿಎಡ್ ಮೈದಾನದಲ್ಲಿ ನಡೆಯುವ ಯುವಕ್ರಾಂತಿ ಹೆಸರಿನ ಸಮಾವೇಶದಲ್ಲಿ ಭಾಗವಹಿಸುವರು.
ಕಾಂಗ್ರೆಸ್ ಪಾದಯಾತ್ರೆಯ ಉದ್ದೇಶ, ಅವರ ಅನುಭವ, ವಿಚಾರಧಾರೆಗಳನ್ನು ಜನರ ಜತೆ ಹಂಚಿಕೊಳ್ಳಲಿದ್ದಾರೆಂದು ಹೇಳಲಾಗುತ್ತಿದೆ. ಮುಖ್ಯವಾಗಿ ಕಾಂಗ್ರೆಸ್ ಕಾರ್ಯಕರ್ತರಿಗೆ ಶಕ್ತಿ ನೀಡಲೆಂದು ಕಾಂಗ್ರೆಸ್ ನಾಯಕ ಕುಂದಾನಗರಿಗೆ ಆಗಮಿಸಲಿದ್ದಾರೆ.

ಬೆಳಗಾವಿ