ರೈಲಿಗೆ ಕಲ್ಲು ಎಸೆದಿರುವುದು ವಿಕೃತ ಮನೋಭಾವ

Advertisement

ಹುಬ್ಬಳ್ಳಿ: ಧಾರವಾಡ-ಬೆಂಗಳೂರು ವಂದೇ ಭಾರತ ರೈಲಿಗೆ ಕಲ್ಲೆಸೆದಿದ್ದು ವಿಕೃತ ಮನೋಭಾವ ಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ನಗರದಲ್ಲಿಂದು ಮಾತನಾಡಿದ ಅವರು, ದೇಶದ ಅನೇಕ ಭಾಗದಲ್ಲಿ ಈ ರೀತಿ ಆಗುತ್ತಿದೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ವಂದೇ ಭಾರತ ರೈಲು ದೇಶದ ಆಸ್ತಿ. ದೇಶದ ಜನರಿಗೆ ಆಧುನಿಕ ಸೌಲಭ್ಯ ಒದಗಬೇಕೆಂಬ ಉದ್ದೇಶದಿಂದ ರೈಲು ಕಲ್ಪಿಸಲಾಗಿದೆ. ಈ ರೈಲುಗಳು ಭಾರತದಲ್ಲಿ ತಯಾರಾಗಬೇಕೆಂಬುದು ಪ್ರಧಾನಿ ಮೋದಿ ಅವರ ಕಾಳಜಿಯಾಗಿದ್ದು, ಕೆಲ ಕಿಡಿಗೇಡಿಗಳು ರಸ್ತೆ ಪಕ್ಕಕ್ಕೆ ನಿಂತು ರೈಲಿಗೆ ಕಲ್ಲು ಎಸೆಯುತ್ತಿದ್ದಾರೆ. ರೈಲಿನ ಒಳಗೆ ಇದ್ದವರಿಗೆ ಕಲ್ಲೆಸೆದವರು ಯಾರು ಎಂಬುದು ಗೊತ್ತಾಗುವುದಿಲ್ಲ ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಬಲಪಡಿಸಬೇಕು ಎಂದು ಅಭಿಪ್ರಾಯಪಟ್ಟರು.