ವಿದ್ಯುತ್ ಸ್ಪರ್ಶಿಸಿ ರೈತ, ಮಗಳು ಸಾವು

ಸಾವು
Advertisement

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ಬಸವನಹಳ್ಳಿ ಗ್ರಾಮದ ಜಮೀನಿನಲ್ಲಿ ವಿದ್ಯುತ್ ಸ್ಪರ್ಶಿಸಿ​ ತಂದೆ ಹಾಗು ಮಗಳು ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ. ಬಸವನಹಳ್ಳಿಯ ರಾಮಕೃಷ್ಣ ರೆಡ್ಡಿ (65) ಹಾಗೂ ಮಗಳು ನಿರ್ಮಲ (45) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ರಾಮಕೃಷ್ಣ ರೆಡ್ಡಿ ಅವರು ತಮ್ಮ ಹೊಲದಲ್ಲಿ ನೀರು ಹಾಯಿಸಲು ತೆರಳಿದ್ದರು. ಕೊಳವೆ ಬಾವಿಯ ಬಳಿ ವಿದ್ಯುತ್ ಶಾಕ್​ ತಗುಲಿ ಅವರು ಮೃತಪಟ್ಟಿದ್ದಾರೆ. ತಂದೆ ಬರುವುದು ತಡವಾದ್ದರಿಂದ ಹೊಲಕ್ಕೆ ಹುಡುಕಿಕೊಂಡು ಬಂದ ಮಗಳು ಹೊಲದಲ್ಲಿ ಬಿದ್ದಿರುವ ತಂದೆಯನ್ನು ಎಬ್ಬಿಸಲು ಮುಟ್ಟಿದ್ದಾರೆ. ಇದರಿಂದ ಅವರೂ ಕೂಡ ವಿದ್ಯುತ್​ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಪಾವಗಡ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.