ವಿನಾಶಕಾಲೇ ವಿಪರೀತ ಬುದ್ಧಿ

Advertisement

ಬೆಂಗಳೂರು: ಸಮಾಜ ಸಮಾಜದ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುತ್ತಿರುವುದನ್ನು ರಾಜ್ಯದ ಜನ ಕ್ಷಮಿಸಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಾಶಕಾಲೇ ವಿಪರೀತ ಬುದ್ಧಿ. ಶ್ರೀ ರಾಮಮಂದಿರ ಉದ್ಘಾಟನೆ ವೇಳೆ ನಾವೆಲ್ಲರೂ ಒಂದೇ ಎಂಬ ಭಾವನೆ ಮೂಡಿದೆ. ಆದರೆ ಡಿಜೆ ಹಳ್ಳಿ ಕೆಜಿ ಹಳ್ಳಿ ಘಟನೆಯಲ್ಲಿ ಪೋಲೀಸ್ ಠಾಣೆಗೆ ಬೆಂಕಿ ಹಾಕಿದ ದೇಶದ್ರೋಹಿಗಳ ರಕ್ಷಣೆಗೆ ಸರ್ಕಾರ ಮುಂದಾಗಿದೆ. ಬೇರೆ ಬೇರೆ ದೇಶದ್ರೋಹಿಗಳಿಗೂ ರಕ್ಷಣೆ ಮಾಡ್ತೀರಾ?, ಸಮಾಜ ಸಮಾಜದ ನಡುವೆ ದ್ವೇಷ ಬಿತ್ತುವ ಕೆಲಸ ಮಾಡುತ್ತಿರುವುದನ್ನು ರಾಜ್ಯದ ಜನ ಕ್ಷಮಿಸಲ್ಲ, ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ಮಾಡ್ತಿದೆ, ಅಲ್ಪಸಂಖ್ಯಾತರಿಂದಲೇ ತಾವು ಅಧಿಕಾರಕ್ಕೆ ಬಂದಿರುವ ಭಾವನೆ ಕಾಂಗ್ರೆಸ್‌ನಲ್ಲಿದೆ ಎಂದು ವಾಗ್ದಾಳಿ ನಡೆಸಿದರು.