ವಿಶ್ವದಲ್ಲಿ ಕರ್ನಾಟಕವನ್ನು ನಂಬರ್ ಒನ್ ಮಾಡುವ ಚುನಾವಣೆ

Advertisement

ಬೀದರ್​: ಜೆಲ್ಲೆಯ ಹುಮ್ನಾಬಾದ್​ ತಾಲೂಕಿನ ಚಿನಕೇರಾ ಕ್ರಾಸ್​​​ ಬಳಿ ಬಿಜೆಪಿ ಬೃಹತ್​ ಸಮಾವೇಶದಲ್ಲಿ ಭಾಗಿಯಾದ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲ್ಲಿ ಭಾಷಣ ಆರಂಭಿಸಿದ ನರೇಂದ್ರ ಮೋದಿ ಜಗಜ್ಯೋತಿ ಬಸವಣ್ಣನವರಿಗೆ ನಮಸ್ಕರಿಸಿದರು. ಬಸವೇಶ್ವರರ ನಾಡಿಗೆ ನನ್ನ ನಮಸ್ಕಾರ ಎಂದು ಹೇಳಿದರು. ಈ ಚುನಾವಣೆ ಬರೀ ಐದು ವರ್ಷದ ಚುನಾವಣೆಯಲ್ಲ, ವಿಶ್ವದಲ್ಲಿ ಕರ್ನಾಟಕವನ್ನು ನಂಬರ್ ಒನ್ ಮಾಡುವ ಚುನಾವಣೆ ಎಂದು ಹೇಳಿದರು. ಈ ವಿಧಾನಸಭೆ ಚುನಾವಣೆಗೆ ನನ್ನ ಈ ಯಾತ್ರೆ ಬೀದರ್​​ನಿಂದ ಆರಂಭವಾಗುತ್ತಿರುವುದು ನನ್ನ ಭಾಗ್ಯ. ಬಸವೇಶ್ವರರ ಅನುಗ್ರಹ ನಮಗೆ ಶಕ್ತಿ ತುಂಬುತ್ತದೆ. ಕರ್ನಾಟಕದ ಕಿರೀಟ ಬೀದರ್​​ನ ಆಶೀರ್ವಾದ ನನಗೆ ಸಿಕ್ಕಿದೆ ಎಂದರು, ಡಬಲ್ ಎಂಜಿನ್ ಸರ್ಕಾರದ ಶಕ್ತಿಯಿಂದ ಕರ್ನಾಟಕವನ್ನು ನಂಬರ್ 1 ಮಾಡುವುದನ್ನು ಯಾರೂ ತಡೆಯಲಾರರು. ಡಬಲ್ ಎಂಜಿನ್ ಸರ್ಕಾರದ ಪ್ರಯೋಜನಕ್ಕೆ ಒಂದು ಉದಾಹರಣೆ ನೀಡುತ್ತೇನೆ. ಬಿಜೆಪಿ ಸರ್ಕಾರದಿಂದ ದೇಶದಲ್ಲಿ ವಿದೇಶಿ ಬಂಡವಾಳ ಹೂಡಿಕೆ ಹೆಚ್ಚುತ್ತಿದೆ ಎಂದರು.