ವಿಶ್ವ ಪರಿಸರ ದಿನ: ರಾಚೇನಹಳ್ಳಿಯಲ್ಲಿ ಡಿಕೆ ಶಿವಕುಮಾರ ಗಿಡ ನೆಡುವ ಮೂಲಕ ಚಾಲನೆ

Advertisement

ವಿಶ್ವ ಪರಿಸರ ದಿನದ ಅಂಗವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಕೃಷ್ಣ ಭೈರೇಗೌಡ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೇರಿದಂತೆ ಹಲವರು ಭಾಗಿಯಾಗಿ ಗಿಡ ನೆಡುವ ಕಾರ್ಯಕ್ರಮ ನಡೆಯಿತು. ಈ ಕರಿತು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು ಇಂದು ಒಂದು ಒಳ್ಳೆಯ ಕೆಲಸದ ಮೂಲಕ ದಿನವನ್ನು ಆರಂಭಿಸಿದೆ. ಬ್ಯಾಟರಾಯನಪುರ ಬಳಿಯ ರಾಚೇನಹಳ್ಳಿಯಲ್ಲಿ ಇಂದು ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಿಡ ನೆಡುವ ಮೂಲಕ ಚಾಲನೆ ನೀಡಿದೆ ಎಂದಿದ್ದಾರೆ.