ನಮ್ಮ ಜಿಲ್ಲೆಸುದ್ದಿಗಳು ಶಾಸಕ ಯತ್ನಾಳ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ, ಸಿದ್ದರಾಮಯ್ಯ By Samyukta Karnataka - July 19, 2023 Share FacebookTwitterWhatsAppLinkedinPinterestTelegramCopy URL Advertisement ಬೆಂಗಳೂರು: ಸದನದಲ್ಲಿ ನೂಕಾಟ ತಳ್ಳಾಟದ ವೇಳೆ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥರಾಗಿ ಕುಸಿದುಬಿದ್ದರು. ಅವರನ್ನು ವಿಧಾನಸೌಧದಿಂದಲೇ ಆಂಬ್ಯುಲೆನ್ಸ್ ಮೂಲಕ ಕನ್ನಿಂಗ್ಹ್ಯಾಂ ರಸ್ತೆಯಲ್ಲಿರೋ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸದನದಲ್ಲಿ ಪ್ರತಿಭಟನೆ ನಡೆಸುವ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ @siddaramaiah ಅವರು ಭೇಟಿಮಾಡಿ, ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.ವಿಧಾನಸಭೆಯ ಸಭಾಧ್ಯಕ್ಷರಾದ @utkhader ಅವರು ಈ ವೇಳೆ ಉಪಸ್ಥಿತರಿದ್ದರು. pic.twitter.com/rdxRamEjeR— CM of Karnataka (@CMofKarnataka) July 19, 2023 ವಿಧಾನಸೌಧದಲ್ಲಿ ಇಂದು ನಡೆದ ಗದ್ದಲದ ನಡುವೆ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಪಕ್ಷದ ಶಾಸಕರಾದ ಶ್ರೀ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಲಾಯಿತು. ಶೀಘ್ರದಲ್ಲಿ ಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳುವಂತೆ ಹಾರೈಸಲಾಯಿತು. pic.twitter.com/4MEZnpuVNy— B.S.Yediyurappa (@BSYBJP) July 19, 2023 Share this:FacebookXLike this:Like Loading...