ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ ತಂಡ ಭೇಟಿ

Advertisement

ಶಿವಮೊಗ್ಗ: ಬಿಜೆಪಿಯ ಸತ್ಯಶೋಧನಾ ಸಮಿತಿ ತಂಡ ಶಿವಮೊಗ್ಗ ನಗರದ ರಾಗಿಗುಡ್ಡಕ್ಕೆ ಭೇಟಿ ನೀಡಿದೆ.
ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿತ್ತು. ಈ ವೇಳೆ ಹಲವು ಮನೆಗಳಿಗೆ ಹಾನಿಯಾಗಿತ್ತು.

ಈ ವೇಳೆ ಪೊಲೀಸರ ಮೇಲೂ ಹಲ್ಲೆಗಳಾಗಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ನಿಷೇಧಾಜ್ಞೆ ಜಾರಿ ಮಾಡಲಾಗಿತ್ತು. ಬಿಜೆಪಿಯ ಸತ್ಯಶೋಧನಾ ಸಮಿತಿ ತಂಡ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ, ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಏಳು ಜನ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ್ದಾರೆ. ಗಾಯಾಳುಗಳ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.