ಶಿವಮೊಗ್ಗ ಗಲಭೆ ಸರ್ಕಾರದ ಓಲೈಕೆ ರಾಜಕಾರಣದ ಫಲ

Advertisement

ಬೆಂಗಳೂರು: ರಾಜ್ಯ ಸರ್ಕಾರ ಒಂದು ಸಮುದಾಯದ ಓಲೈಕೆ ರಾಜಕಾರಣ ಮಾಡುತ್ತಿರುವುದರಿಂದ ಶಿವಮೊಗ್ಗದ ಗಲಭೆಗೆ ಪ್ರೇರಣೆಯಾಗಿದ್ದು, ತಪ್ಪಿತಸ್ಥರು ಯಾರೆ ಇರಲಿ ಅವರನ್ನು ಹಿಡಿದು ಒಳೆಗೆ ಹಾಕುವ ಬದಲು ಸಚಿವರು ಅವರಿಗೆ ಕ್ಲೀನ್ ಚಿಟ್ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಈ ಕುರಿತು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಗಲಭೆ ಮಾಡಿಸುತ್ತಿದ್ದಾರೆಂದು ಸಚಿವರೇ ದಾರಿ ತಪ್ಪಿಸುತ್ತಿದ್ದಾರೆ‌.‌ ಯಾರು ಕ್ರಮ ಕೈಗೊಳ್ಳಬೇಕೊ ಅವರೇ ಹೀಗೆ ಹೇಳಿದರೆ ಸರ್ಕಾರದ ಮೆಲೆ ಜನ ಭರವಸೆ ಇಡುವುದು ಹೇಗೆ ? ಗೃಹ ಸಚಿವರು ಇದು ಸಣ್ಣ ಘಟನೆ ಅಂತ ಹೇಳಿದ್ದಾರೆ . ಈ ಸರ್ಕಾರದ ತುಷ್ಟೀಕರಣದ ನೀತಿಯೇ ಸಮಾಜ ಘಾತುಕ ಶಕ್ತಿಗಳು ಹೆಚ್ಚಾಗಲು ಕಾರಣವಾಗಿದೆ. ಗಡಿ ಜಿಲ್ಲೆಗಳಲ್ಲಿ ಸಮಾಜ ಘಾತುಕ‌ಶಕ್ತಿಗಳು ಜಾಲ ವ್ಯಾಪಿಸಿಕೊಳ್ಳಲು ಕಾರಣವಾಗಿದೆ‌ ಎಂದರು.
ಇಷ್ಟೇ ಅಲ್ಲದೇ ಈ ಥರದ ಕೇಸ್ ಗಳಲ್ಲಿ ಆರೆಸ್ಟ್ ಆದವರನ್ನು ಬಿಡುಗಡೆ ಮಾಡುವಂತೆ ಸಚಿವರು, ಶಾಸಕರು ಒತ್ತಾಯ ಮಾಡುವುದನ್ನು ನೋಡಿದರೆ ಈ ಸರ್ಕಾರ ಏನು ಮಾಡಲು ಹೊರಟಿದೆ ಅಂತ ತಿಳಿಯುತ್ತಿಲ್ಲ. ಹಿಂದೆ ಪಿಎಫ್ಬೈ ನಲ್ಲಿ ಇದ್ದವರೆ ಹುಬ್ಬಳ್ಳಿ ಗಲಭೆಯಲ್ಲಿ ಇದ್ದರು. ಡಿಸಿಎಂ ಶಿವಕುಮಾರ್ ಅವರೇ ಹುಬ್ಬಳ್ಳಿ ಗಲಭೆಯಲ್ಲಿ ಪಾಲ್ಗೊಂಡವರ ಪ್ರಕರಣ ವಾಪಸ್ ಪಡೆಯಲು ಪತ್ರ ಬರೆದಿದ್ದಾರೆ ಎಂದರೆ ಏನರ್ಥ.
ಗೃಹ ಸಚಿವರು ಶಿವಮೊಗ್ಗ ಘಟನೆ ಸಣ್ಣ ಘಟನೆ ಅಂತ ಗೃಹ ಸಚಿವರು ಹೇಳಿದ್ದಾರೆ. ಈಗ ತಪ್ಪಿನ ಅರಿವಾಗಿ ತಾವು ಹೇಳಿಲ್ಲ ಅಂತ ತಿರುಗಿಸುತ್ತಿದ್ದಾರೆ.. ಉಡುಪಿಯಲ್ಲಿ ಹಿಂದೂ ಸಂಘಟನೆಗಳು ಕಾರ್ಯಕ್ರಮಕ್ಕೆ ಹಾಕಿರುವ ಬ್ಯಾನರ್ ಗಳನ್ನು ತೆರವುಗೊಳಿಸುವುದು ಓಲೈಕೆ ರಾಜಕಾರಧ ಸ್ಪಷ್ಟ ಉದಾಹರಣೆ ಎಂದು ಹೇಳಿದರು.
ಜಾತಿ ಸಮೀಕ್ಷೆ ಬರಲಿ ನೋಡೋಣ
ನಾವು ಜಾತಿ ಸಮೀಕ್ಷೆ ವಿರೋದ ಮಾಡಿಲ್ಲ. ರಾಜ್ಯ ಸರ್ಕಾರ ಸಾಮಾಜಿಕ ಆರ್ಥಿಕ ಸಮೀಕ್ಷೆ ಮಾಡಿಸಿದ್ದು,ಅದು ಜಾತಿ ಗಣತಿ ಅಲ್ಲ ಅಂತ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ‌.. ಉತ್ತರ ಭಾರತದ ಜಾತಿ ಸಮೀಕರಣಕ್ಕೂ ದಕ್ಷಿಣ ಭಾರತದ ಜಾತಿ ಸಮಿಕರಣಕ್ಕೂ ವ್ಯತ್ಯಾಸ ಇದೆ. ಈ ವರದಿಯಿಂದ ತುಕಲಿತಕ್ಕೊಳಗಾದವರಿಗೆ ನ್ಯಾಯ ಒದಗಿಸುವ ಜವಾಬ್ದಾರಿ ಸರ್ಕಾರಕ್ಕೆ ಇದೆ ಎಂದರು.
ಈ ವರದಿಯಲ್ಲಿ ಏನಿದೆ ಅಂತ ಗೊತ್ತಿಲ್ಲ. ಈಗಾಗಲೇ ವರದಿ ಸೋರಿಕೆ ಆಗಿದೆ ಅಂತ ಆರೋಪ ಇದೆ. ಹೀಗಾಗಿ ಈ ವರದಿಯಲ್ಲಿ ಏನಿದೆಯೊ ಗೊತ್ತಿಲ್ಲ‌‌. ವರದಿ ಬಂದ ಮೇಲೆ ನೋಡೊಣ. ಸಿದ್ದರಾಮಯ್ಯ ಅವರು ಹಿಂದೆ ಸಿಎಂ ಆಗಿದ್ದಾಗಲೇ ವರದಿ ಸ್ವೀಕಾರ ಮಾಡಬಹುದಿತ್ತು. ಆದರೆ ಆಗ ಚುನಾವಣೆ ಬಂತು ಅಂತ ಜಾರಿ ಮಾಡಿಲ್ಲ. ಈಗ ಏನು ಮಾಡುತ್ತಾರೊ ನೊಡೊಣ ಎಂದರು.