ಶ್ರೀಲಂಕಾಕ್ಕೆ ಮರಳಿದ ರಾಜೀವ್ ಹಂತಕರು

Advertisement

ಚೆನ್ನೈ: ದೇಶದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಮೂವರು ಮಾಜಿ ಅಪರಾಧಿಗಳು ಬುಧವಾರ ತಮ್ಮ ತಾಯ್ನಾಡಾದ ಶ್ರೀಲಂಕಾಕ್ಕೆ ಮರಳಿದ್ದಾರೆ. ಮುರುಗನ್ ಅಲಿಯಾಸ್ ಶ್ರೀಹರನ್, ಜಯಕುಮಾರ್ ಹಾಗೂ ರಾಬರ್ಟ್ ಪಾಯಸ್ ಶ್ರೀಲಂಕಾಕ್ಕೆ ತೆರಳಿದ ಮಾಜಿ ಅಪರಾಧಿಗಳು. ೨೦೨೨ರ ನವೆಂಬರ್‌ನಲ್ಲಿ ಸುಪ್ರೀಂಕೋರ್ಟ್ ಈ ಪ್ರಕರಣದ ಏಳು ಅಪರಾಧಿಗಳನ್ನು ಬಿಡುಗಡೆ ಮಾಡಿತ್ತು. ಅವರಲ್ಲಿ ಈ ಮೂವರೂ ಸೇರಿದ್ದಾರೆ. ಜೈಲಿನಿಂದ ಬಿಡುಗಡೆಯಾದ ನಂತರ ತಿರುಚಿರಾಪಳ್ಳಿಯ ವಿಶೇಷ ಶಿಬಿರದಲ್ಲಿದ್ದರು. ಚೆನ್ನೈಯಲ್ಲಿರುವ ಶ್ರೀಲಂಕಾ ಹೈಕಮಿಷನ್ ಅವರಿಗೆ ಪ್ರಯಾಣ ದಾಖಲೆಯನ್ನೂ ನೀಡಿತ್ತು. ಪ್ರಕರಣದಲ್ಲಿ ಶಿಕ್ಷೆಗೊಳಗಾದವರಲ್ಲಿ ಸಂತನ್ ಎಂಬಾತ ಇತ್ತೀಚೆಗೆ ಮೃತಪಟ್ಟಿದ್ದ. ಎಲ್ಲಾ ಏಳು ಅಪರಾಧಿಗಳು ೩೦ ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು.