ಸರ್ಕಾರ ಗೂಂಡಾಗಳ ಪೋಷಣೆಗೆ ನಿಂತಂತಿದೆ

Advertisement

ಬೆಂಗಳೂರು: ದಿನೇ ದಿನೇ ಗೂಂಡಾಗಳ ವರ್ತನೆ ಗಮನಿಸಿದರೆ, ಕಾಂಗ್ರೆಸ್ ಸರ್ಕಾರ ಗೂಂಡಾಗಳ ಪೋಷಣೆಗೆ ನಿಂತಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ.
ನಿತಿನ್ ಮೇಲೆ ನಡೆದ ಹಲ್ಲೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು “ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣಗಳು ನಿರಂತರವಾಗಿ ನಡೆಯುತ್ತಲೇ ಇವೆ. ನಮ್ಮ ಶಿವಮೊಗ್ಗ ಜಿಲ್ಲೆಯಲ್ಲಂತೂ ಇದು ಮರುಕಳಿಸುತ್ತಲೇ ಇದೆ, ಹೊಸನಗರ ತಾಲ್ಲೂಕಿನ ಯುವ ಮೋರ್ಚಾ ಅಧ್ಯಕ್ಷ ನಿತಿನ್ ಅವರ ಮೇಲೆ ಕಾಂಗ್ರೆಸ್ ಗೂಂಡಾಗಳಿಂದ ನಡೆದ ಹಲ್ಲೆ ಅತ್ಯಂತ ಖಂಡನಾರ್ಹ.
ದಿನೇ ದಿನೇ ಗೂಂಡಾಗಳ ವರ್ತನೆ ಗಮನಿಸಿದರೆ, ಕಾಂಗ್ರೆಸ್ ಸರ್ಕಾರ ಗೂಂಡಾಗಳ ಪೋಷಣೆಗೆ ನಿಂತಂತಿದೆ, ತಕ್ಷಣ ಪೋಲಿಸರು ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸುತ್ತೇನೆ. ಇಂಥಾ ಘಟನೆಗಳು ಮತ್ತೆ ಮತ್ತೆ ಮರುಕಳಿಸುವ ಪರಿಸ್ಥಿತಿ ಮುಂದುವರೆದರೆ, ಬಿಜೆಪಿ ಹೋರಾಟದ ಸ್ವರೂಪ ತೀವ್ರಗೊಳಿಸಬೇಕಾದೀತು ಎಂದು ಎಚ್ಚರಿಸುತ್ತಿದ್ದೇನೆ” ಎಂದಿದ್ದಾರೆ.