ಸಾರಿಗೆ ಸಂಸ್ಥೆಯ ಬಸ್ ಪಲ್ಟಿ: ಆಸ್ಪತ್ರೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಬೆಳಗಾವಿ: ಸುವರ್ಣ ವಿಧಾನಸೌಧದ ಬಳಿ ಸಾರಿಗೆ ಸಂಸ್ಥೆಯ ಬಸ್‌ ಪಲ್ಟಿಯಾದ ಘಟನೆಯಲ್ಲಿ ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವಿಷಯ ತಿಳಿಯುತ್ತಿದಂತೆ ಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ, ಎಲ್ಲರಿಗೂ ಧೈರ್ಯವನ್ನು ತುಂಬಿ, ಜತೆಗೆ ಅಗತ್ಯವಿರುವ ಚಿಕಿತ್ಸೆಯನ್ನು ನೀಡಿರಿ ಎಂದು ವೈದ್ಯರಿಗೆ ಸೂಚಿಸಿದ್ದಾರೆ.