ಸಿಂದಗಿ ಪುರಸಭೆ ಮುಖ್ಯಾಧಿಕಾರಿ ಅಮಾನತು

Advertisement

ವಿಜಯಪುರ(ಸಿಂದಗಿ): ಕರ್ತವ್ಯದ ಲೋಪದ ಹಿನ್ನೆಲೆಯಲ್ಲಿ ಸಿಂದಗಿ ಪುರಸಭೆ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ ಅವರನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಟಿ. ಭೂಬಾಲನ್ ಆದೇಶ ಹೊರಡಿಸಿದ್ದಾರೆ.
ನಗರದ ಸ್ವಚ್ಛತೆ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರು ನೀಡಿದ ದೂರುಗಳನ್ನು ಪುರಸಭೆ ಮುಖ್ಯಾಧಿಕಾರಿ ಕಡೆಗಣಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ನಾಲೈದು ದಿನಗಳ ಹಿಂದೆ ನಗರದಲ್ಲಿ ಸುರಿದ ಭಾರಿ ಮಳೆಯಿಂದ ಪಟ್ಟಣದ ೨೩ ವಾರ್ಡ್‌ಗಳಲ್ಲಿ ಚರಂಡಿ ನೀರು ಮನೆಗಳಿಗೆ ನುಗ್ಗಿ ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಜೊತೆಗೆ ಕಚೇರಿಯ ಯಾವುದೇ ಸಭೆಗಳಿಗೆ ಅವರು ಹಾಜರಿರುವುದಿಲ್ಲ. ಪುರಸಭೆಯಲ್ಲಿ ನಡೆಯುವ ವ್ಯವಹಾರದ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ಕೇಳಿದಾಗಲೂ ಅವರು ಯಾವುದೇ ಉತ್ತರ ನೀಡಿಲ್ಲ. ಈ ಎಲ್ಲವುಗಳನ್ನು ಉಲ್ಲೇಖಿಸಿ ಗುರುರಾಜ ಚೌಕಿಮಠ ಅವರನ್ನು ಜಿಲ್ಲಾಧಿಕಾರಿ ಟಿ. ಭೂಬಾಲನ್ ಅಮಾನತು ಮಾಡಿದ್ದಾರೆ.