ಸಿಂಧನೂರ: ಲೋಕಾಯುಕ್ತ ಅಧಿಕಾರಿಗಳ ದಾಳಿ

Advertisement

ರಾಯಚೂರು: ಸಿಂಧನೂರು ನಗರ ಮತ್ತು ಗ್ರಾಮೀಣ ಯೋಜನಾ ಘಟಕದ ಸಹಾಯಕ ನಿರ್ದೇಶಕ ಶರಣಪ್ಪ ಮಡಿವಾಳ ಅವರ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶರಣಪ್ಪ ಮಡಿವಾಳ ಅವರು ಸಿಂಧನೂರಿನ ನಗರ ಹಾಗೂ ಗ್ರಾಮೀಣ ಯೋಜನಾ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಸಿಂಧನೂರು ನಗರದ ಕಚೇರಿ ಮತ್ತು ಮನೆಯ ಮೇಲೆ ದಾಳಿ

ಕಲಬುರಗಿಯ ನಾಗನಹಳ್ಳಿ-ಖಣದಾಳ ರಸ್ತೆಯಲ್ಲಿರುವ ಫಾರ್ಮ್ ಹೌಸ್ನ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಶರಣಪ್ಪ ಮೇಲೆ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪ
ಕಲಬುರಗಿ ಲೋಕಾಯುಕ್ತ ಎಸ್ಪಿ ಎ.ಆರ್. ಕರ್ನೂಲ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದು.
ಮನೆಯಲ್ಲಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಶರಣಪ್ಪ ಮಡಿವಾಳ ಅವರು ಮೂಲತಃ ಕಲಬುರಗಿಯ ತಾಲ್ಲೂಕಿನ ಮನೋಳ್ಳಿ ಗ್ರಾಮದವರಾಗಿದ್ದಾರೆ.