ಸಿಐಡಿ ತನಿಖೆಗೆ ಸ್ಯಾಂಟ್ರೋ ರವಿ ಪ್ರಕರಣ

Advertisement

ವೇಶ್ಯಾವಾಟಿಕೆ, ಅತ್ಯಾಚಾರ, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಅನೇಕ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿ ಮಂಜುನಾಥ್ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣದ ತನಿಖೆ ನಡೆಸಲು ಸಿಐಡಿ ಪೊಲೀಸರಿಗೆ ವರ್ಗಾಯಿಸುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ನೀಡಿದ್ದಾರೆ.
ಜನವರಿ 2ರಂದು ಸ್ಯಾಂಟ್ರೋ ರವಿಯ ಎರಡನೇ ಪತ್ನಿ ದೂರು ದಾಖಲಿಸಿದ್ದು, ಬಳಿಕ ಗುಜರಾತ್‌ನಲ್ಲಿ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸದ್ಯ ಡಿಜಿ-ಐಜಿಪಿ ಆದೇಶದ ಬಳಿಕ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸುವಂತೆ ಸರಕಾರ ನಿರ್ದೇಶನ ನೀಡಿದೆ.