ಸಿಲಿಂಡರ್ ಸ್ಪೋಟ: ಓರ್ವ ಮಹಿಳೆ ಸಾವು, ನಾಲ್ವರಿಗೆ ಗಾಯ

Advertisement

ಧಾರವಾಡ: ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ ಸಿಲಿಂಡರ್ ಸ್ಪೋಟಗೊಂಡು ಓರ್ವ ಮಹಿಳೆ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡ ಘಟನೆ ಸಂಭವಿಸಿದೆ.

ಮಹಾದೇವಿ ವಗೆಣ್ಣವರ (30) ಎಂಬ ಮಹಿಳೆಯೇ ಈ ಘಟನೆಯಲ್ಲಿ ಸಾವನ್ನಪ್ಪಿದ ದುರ್ದೈವಿ. ಉಳಿದಂತೆ ಸುರೇಶ ವಗೆಣ್ಣವರ, ಶ್ರೀಧರ ವಗೆಣ್ಣವರ, ಚಿನ್ನಪ್ಪ ವಗೆಣ್ಣವರ ಹಾಗೂ ಗಂಗವ್ವ ವಗೆಣ್ಣವರ ಎಂಬುವವರು ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಗರಗ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.