ಹಕ್ಕಿಪಿಕ್ಕಿ ಬುಡಕಟ್ಟು ಜನರೊಂದಿಗೆ ಪ್ರಧಾನಿ ಸಂವಾದ

Advertisement

ಶಿವಮೊಗ್ಗ: ‘ಆಪರೇಷನ್ ಕಾವೇರಿ’ ಮೂಲಕ ಸುಡಾನ್‌ನಿಂದ ಕರೆತರಲಾದ ಹಕ್ಕಿಪಿಕ್ಕಿ ಬುಡಕಟ್ಟು ಜನರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಸಂವಾದ ನಡೆಸಿದರು.
ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಅವರು ಸುಡಾನ್‌ನಲ್ಲಿ ಎದುರಿಸಿದ ಕಠಿಣ ಸಂದರ್ಭಗಳನ್ನು ವಿವರಿಸಿದರು.
ಇಡೀ ಜಗತ್ತಿನಲ್ಲಿ ಯಾವುದೇ ಭಾರತೀಯರು ಯಾವುದೇ ರೀತಿಯ ತೊಂದರೆಯಲ್ಲಿದ್ದರೆ, ಸಮಸ್ಯೆ ಬಗೆಹರಿಯುವವರೆಗೂ ಸರ್ಕಾರ ವಿರಮಿಸುವುದಿಲ್ಲ ಎಂದು ಪ್ರಧಾನಿ ಮೋದಿ ತಿಳಿಸಿದರು.