ಹಾವೇರಿ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ

Advertisement

ಹಾವೇರಿ: ಹಾವೇರಿ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಸೋಮವಾರ ನಾಮಪತ್ರ ಸಲ್ಲಿಸಿದರು.
ಸಾಂಕೇತಿಕವಾಗಿ ಕುಟುಂಬದವರೊಂದಿಗೆ ಆನಂದಸ್ವಾಮಿ ಗಡ್ಡದೇವರಮಠ ನಾಮಪತ್ರ ಸಲ್ಲಿಸಿದರು. ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ರುಘುನಂದನ್ ಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದರು. ಎಪ್ರಿಲ್ 17 ರಂದು ಮತ್ತೊಮ್ಮೆ ಬೃಹತ್ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ.