1 ಗ್ರಾಂ ಅಕ್ಕಿ ಕಡಿಮೆಯಾದರೂ ಒಪ್ಪಲ್ಲ

Advertisement

ಶಿವಮೊಗ್ಗ: ಕಾಂಗ್ರೆಸ್ ನಾಯಕರು 10 ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಅದರಂತೆ ಅಕ್ಕಿ ವಿತರಣೆ ಮಾಡಬೇಕು. 1 ಗ್ರಾಂ ಕಡಿಮೆಯಾದರೂ ಜನ ಅದನ್ನು ಒಪ್ಪುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸಮಯದಲ್ಲೂ ಮೋದಿಯವರು ಹೆಚ್ಚುವರಿ ಅಕ್ಕಿ ಕೊಡುತ್ತೇವೆ ಎಂದು ಹೇಳಿಲ್ಲ. ಕೇಂದ್ರ ಸರ್ಕಾರವನ್ನು ಅನಗತ್ಯ ದೂಷಿಸುವುದು ಸರಿಯಲ್ಲ. ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದೆ. ಕಾಂಗ್ರೆಸ್ ಎಲ್ಲಿಯಾದರೂ ಅಕ್ಕಿ ಖರೀದಿ ಮಾಡಿ ಕೊಡಲಿ ಎಂದರು.