ಪಾಟ್ನಾ: ಯುಪಿಎ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ 10 ವರ್ಷಗಳ ಕಾಲ ಜನರಿಗೆ ಉಚಿತ ಧಾನ್ಯಗಳನ್ನು ಏಕೆ ನೀಡಲಿಲ್ಲ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪ್ರಶ್ನಿಸಿದ್ದಾರೆ.
ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಇಂದು ಕಾಂಗ್ರೆಸ್ ಉಚಿತ ಧಾನ್ಯಗಳ ಬಗ್ಗೆ ಮಾತನಾಡುತ್ತಿದೆ, ಕಾಂಗ್ರೆಸ್ ಬಡತನದ ಬಗ್ಗೆ ಮಾತನಾಡುತ್ತಿದೆ, ಐಎಂಎಫ್ ವರದಿಯೊಂದಿಗೆ ನಾನು ಅವರಿಗೆ ಹೇಳಲು ಬಯಸುತ್ತೇನೆ, ಎನ್ಡಿಎ ಸರ್ಕಾರದ ಅಡಿಯಲ್ಲಿ 13 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ ಎಂದರು.