ರಾಜಕೀಯದಲ್ಲಿ ಧರ್ಮವಿದ್ದರೆ ಅಡ್ಡಿಯಿಲ್ಲ: ಮಂತ್ರಾಲಯ ಶ್ರೀಗಳು

Advertisement

ರಾಯಚೂರು: ಸಿಎಂ ಸ್ಥಾನಮಾನದ ಆಲೋಚನೆ ವಿಚಾರಕ್ಕೆ ಮಂತ್ರಾಲಯದಲ್ಲಿ ಪ್ರತಿಕ್ರಿಯೆ ನೀಡಿದ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿಯವರು, ರಾಜಕೀಯಕ್ಕೆ ಇಂಥವರೆ ಬರಬೇಕು, ಬರಬಾರದರು ಅಂತೇನಿಲ್ಲ, ರಾಜಕೀಯಕ್ಕೆ ಬಂದಂತಹ ವ್ಯಕ್ತಿಗಳು ರಾಜ್ಯದ ಜನತೆ ಬಗ್ಗೆ ಕಾಳಜಿ ಉಳ್ಳವರಾಗಿರಬೇಕು, ಧರ್ಮದಲ್ಲಿ ರಾಜಕೀಯ ಬರಬಾರದು, ರಾಜಕೀಯದಲ್ಲಿ ಧರ್ಮ ಇರಬೇಕು. ಧರ್ಮವಿದ್ದರೆ ಅದು ಉತ್ತಮವಾದ ಗುಣಮಟ್ಟದ ಆಡಳಿತ, ವ್ಯವಸ್ಥೆಯಾಗಿ ಕಾಣುತ್ತದೆ ಅಂತ ಭಾವಿಸುತ್ತೇನೆ ಎಂದು ಹೇಳಿದರು.