ರೈಲ್ವೆ ಹಳಿಯಲ್ಲಿ ಕೆಎಸ್‌ಆರ್‌ಟಿಸಿ ಉದ್ಯೋಗಿ ಶವ

Advertisement

ಪುತ್ತೂರು: ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ಉದ್ಯೋಗಿಯೊಬ್ಬರ ಮೃತದೇಹ ಕಾಣಿಯೂರು ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಈತ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ.
ನೂತನ ಕಡಬ ತಾಲೂಕಿನ ಬೆಳಂದೂರು ಗ್ರಾಮದ ಅಬೀರ ನಿವಾಸಿ ಕುಸುಮಾಧರ(೨೮) ಮೃತ ಪಟ್ಟ ವ್ಯಕ್ತಿ.
ಕಳೆದ ೯ ವರ್ಷಗಳಿಂದ ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದಲ್ಲಿ ಚಾಲಕ, ನಿರ್ವಾಹಕರಾಗಿ ಕುಸುಮಾಧರ ಅವರು ಕೆಲಸ ನಿರ್ವಹಿಸುತ್ತಿದ್ದರು. ಕೆಲ ತಿಂಗಳ ಹಿಂದಷ್ಟೇ ವಿವಾಹಿತರಾಗಿದ್ದರು.
ಮೃತರು ಪತ್ನಿ, ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.ರೈಲ್ವೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.