ಮಹಿಳಾ ಸಬಲೀಕರಣಕ್ಕಾಗಿ ಕಣಕ್ಕಿಳಿದ ಶೆಟ್ರ ಮಗಳು

Advertisement

ಮೂಡುಬಿದಿರೆ: ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಅಭಿವೃದ್ಧಿಯಾಗದಿರುವ ಹಲವಾರು ಯೋಜನೆಗಳಿವೆ. ಶುದ್ಧ ಕುಡಿಯುವ ನೀರಿನ ಸಮಸ್ಯೆ, ಉದ್ಯೋಗ, ವಸತಿ, ಆರೋಗ್ಯ ಹಾಗೂ ಪ್ರವಾಸೋದ್ಯಮಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಪರಿಹಾರ ಕಾಣದೆ ಹಾಗೇ ಉಳಿದುಕೊಂಡಿದೆ ಇದಕ್ಕೆ ಪರಿಹಾರವನ್ನು ಕಂಡುಕೊಳ್ಳಬೇಕಾಗಿದೆ ಹಾಗೂ ಮಹಿಳಾ ಸಬಲೀಕರಣಕ್ಕಾಗಿ ಹೆಚ್ಚಿನ ಒತ್ತನ್ನು ನೀಡುವ ಉದ್ದೇಶವನ್ನು ಹೊಂದಿದ್ದೇನೆ ಎಂದು ಮಾಜಿ ಸಚಿವ ಕೆ.ಅಮರನಾಥ ಶೆಟ್ಟಿ ಅವರ ಪುತ್ರಿ ಡಾ. ಅಮರಶ್ರೀ ಅಮರನಾಥ ಶೆಟ್ಟಿ ಅವರು ಹೇಳಿದರು.
ಮುಲ್ಕಿ-ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಡಾ. ಅಮರಶ್ರೀ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪರಿಹಾರವನ್ನು ಕಂಡುಕೊಳ್ಳದೆ ಹಾಗೆ ಬಾಕಿ ಉಳಿದಿರುವ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಮನೆ ಮನೆಗೆ ತೆರಳಿ ಜೆಡಿಎಸ್ ಪಕ್ಷ ಬೆಂಬಲಿಸುವಂತೆ ಮನವಿ ಮಾಡುತ್ತಿದ್ದೇನೆ. ಮುಂದಿನ ಐದು ವರ್ಷಗಳಲ್ಲಿ ಕ್ಷೇತ್ರದ ಅಭಿವೃದ್ಧಿಯ ದೂರದೃಷ್ಠಿ ಚಿಂತನೆಯ ರೂಪುರೇಷೆಗಳನ್ನು ಸಿದ್ಧಪಡಿಸಿದ್ದು, ಆ ಪ್ರಕಾರವಾಗಿಯೇ ನಡೆಯುವುದಾಗಿ ಹೇಳಿದರು.