ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಶಕ್ತಿ ಪ್ರದರ್ಶನ

Advertisement

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಬೃಹತ್ ಶಕ್ತಿ ಪ್ರದರ್ಶನದೊಂದಿಗೆ ಹುಬ್ಬಳ್ಳಿ ಪಾಲಿಕೆ ಕಚೇರಿಯಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದರು. ನಗರದ ನಾಗಶೆಟ್ಟಿಕೊಪ್ಪದ ಆಂಜನೇಯಸ್ವಾಮಿ‌ ದೇವಸ್ಥಾನದಿಂದ ತೆರೆದ ವಾಹನದಲ್ಲಿ ಬೃಹತ್ ಮೆರವಣಿಗೆ ನಡೆಸಿದರು.
ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿ, ಬಿಜೆಪಿ ಪಕ್ಷಕ್ಕೆ, ನರೇಂದ್ರ ಮೋದಿ ಅವರಿಗೆ, ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಅವರಿಗೆ ಜೈಕಾರ ಹಾಕಿದರು. ಮೆರವಣಿಗೆಯಲ್ಲಿ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ.ನಡ್ಡಾ, ಬಿ.ಎಸ್. ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರ ರಾರಾಜಿಸಿದವು. ವಾದ್ಯ ಮೇಳ, ಬೊಂಬೆ ಕುಣಿತ ಗಮನ ಸೆಳೆದವು.
ನಾಗಶೆಟ್ಟಿಕೊಪ್ಪದಿಂದ ಕೇಶ್ವಾಪೂರದ ಸರ್ವೋದಯ ಸರ್ಕಲ್ ಮೂಲಕ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಮಹಾನಗರ ಪಾಲಿಕೆಯವರೆಗೂ ಮೆರವಣಿಗೆ ನಡೆಯಿತು. ಮಹೇಶ ಟೆಂಗಿನಕಾಯಿ ಅವರಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಡಾ.ಮಹೇಶ ನಾಲವಾಡ, ಸಂತೋಷ ಚವ್ಹಾಣ, ರಾಜಣ್ಣ ಕೊರವಿ, ಬಸವರಾಜ ಕುಂದಗೋಳಮಠ, ಸಂಜಯ ಕಪಟಕರ್, ಮಹಾನಗರ ಪಾಲಿಕೆ ಸದಸ್ಯರು ಇದ್ದರು.