ಬೆಳಗಾವಿ ಬಂಡಾಯ: ಜೋಶಿ ಮಹತ್ವದ ಸಭೆ

Advertisement

ಬೆಳಗಾವಿ: ಬೆಳಗಾವಿ ಬಿಜೆಪಿಯಲ್ಲಿ ಎದ್ದಿರುವ ಬಂಡಾಯ ಶಮನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಹತ್ವದ ಸಭೆ ನಡೆಸಿದರು.
ಭಾನುವಾರ ಸಂಜೆ ಬೆಳಗಾವಿ ಉತ್ತರ ವಲಯದ ಬಿಜೆಪಿ ಕಚೇರಿಯಲ್ಲಿ ಬೆಳಗಾವಿ ಜಿಲ್ಲಾ ಮುಖಂಡರ ಜೊತೆ ಮಹತ್ವದ ಸಭೆ ನಡೆಯಿತು. ಟಿಕೆಟ್ ಹಂಚಿಕೆ ವಿಚಾರವಾಗಿ ನಡೆದ ಗೊಂದಲ ಸರಿಪಡಿಸುವುದು ಹಾಗೂ ಬೆಳಗಾವಿ ಮತ್ತು ಚಿಕ್ಕೋಡಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸುವ ಉದ್ದೇಶದಿಂದ ನಡೆದ ಸಭೆಯಲ್ಲಿ ಜಿಲ್ಲೆಯ ಹಲವು ಮುಖಂಡರು ಹಾಗೂ ಬಿಜೆಪಿ ಅಭ್ಯರ್ಥಿಗಳು ಭಾಗವಹಿಸಿದ್ದರು.
ಈಗಾಗಲೇ ಟಿಕೆಟ್ ನಿರಾಕಣೆಯಿಂದ ಮುನಿಸಿಕೊಂಡಿದ್ದ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರೆ. ಮಾರುತಿ ಅಷ್ಟಗಿ ಜೆಡಿಎಸ್ ಸೇರಿದ್ದಾರೆ. ಶಾಸಕ ಮಹಾದೇವಪ್ಪ ಯಾದವಾಡ ಸೇರಿ ಅನೇಕರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ಬಂಡಾಯ ಶಮನ ಮಾಡುವ ಉದ್ದೇಶದಿಂದ ಪ್ರಹ್ಲಾದ್ ಜೋಶಿ ನೇತೃತ್ವದ ಸಭೆ ಮಹತ್ವದ ಪಡೆದಿದೆ.
ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾನಾ, ಸಂಸದೆ ಮಂಗಲಾ ಅಂಗಡಿ, ಈರಣ್ಣಾ ಕಡಾಡಿ, ರಮೇಶ್ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ರಮೇಶ್ ಕತ್ತಿ, ಸೇರಿದಂತೆ ಬಿಜೆಪಿ ಅಭ್ಯರ್ಥಿಗಳು ಪಾಲ್ಗೊಂಡಿದ್ದರು.