ಎಷ್ಟು ಕೆಸರು ಎರಚುತ್ತಾರೋ ಅಷ್ಟು ಕಮಲ ಅರಳುತ್ತೆ

Advertisement

ಬೀದರ್​: ಪ್ರಧಾನಿ ನರೇಂದ್ರ ಮೋದಿ ಜೆಲ್ಲೆಯ ಹುಮ್ನಾಬಾದ್​ ತಾಲೂಕಿನ ಚಿನಕೇರಾ ಕ್ರಾಸ್​​​ ಬಳಿ ಬಿಜೆಪಿ ಬೃಹತ್​ ಸಮಾವೇಶದಲ್ಲಿ ಭಾಗವಹಿಸಿ ಅಪಾರ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದರು. ವೀರ ಸಾವರ್ಕರ್​​ ಅವರನ್ನೂ ಕಾಂಗ್ರೆಸ್​ ನಾಯಕರು ನಿಂದಿಸುತ್ತಿದ್ದಾರೆ. ಅಂಬೇಡ್ಕರ್ ಅವರನ್ನೂ ನಿಂದಿಸುತ್ತಿದ್ದಾರೆ. ಮಹಾನ್​ ಪುರುಷರನ್ನು ಅವಮಾನಿಸುವುದು ಕಾಂಗ್ರೆಸ್​​ನವರ ಕೆಲಸ. ಅವರು ನಿಂದಿಸುತ್ತಾ ಇರಲಿ. ನಾನು ಜನತಾ ಜನಾರ್ದನನ ಸೇವೆಯಲ್ಲಿ ನಿರತನಾಗಿರುತ್ತೇನೆ, ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್​​ನವರು ನನ್ನನ್ನು ಬೈಯ್ಯುತ್ತಿದ್ದಾರೆ. 91 ಬಾರಿ ಕಾಂಗ್ರೆಸ್​​ನವರು ನನಗೆ ಬೈದಿದ್ದಾರೆ. ನನಗೆ ಬೈಯ್ಯುವುದರಲ್ಲೇ ಕಾಂಗ್ರೆಸ್​​ನವರು ಸಮಯ ವ್ಯರ್ಥ ಮಾಡ್ತಿದ್ದಾರೆ. ಒಳ್ಳೆಯ ಕೆಲಸ ಮಾಡುವವರನ್ನು ನಿಂದಿಸುವುದು ಕಾಂಗ್ರೆಸ್​​ನವರ ಚಾಳಿ. ಮೊದಲು ಚೌಕೀದಾರ್ ಚೋರ್ ಎಂದರು. ನನ್ನನ್ನು ನಿಂದಿಸಿದಾಗಲೆಲ್ಲ ಅವರಿಗೆ ಶಿಕ್ಷೆಯಾಗಿದೆ. ಡಾ.ಅಂಬೇಡ್ಕರ್​​ ಅವರನ್ನು ಕೂಡ ಕಾಂಗ್ರೆಸ್​​ನವರು ನಿಂದಿಸಿದ್ದಾರೆ. ಬಾಬಾ ಸಾಹೇಬ್ ಅವರನ್ನು ರಾಕ್ಷಸ, ರಾಷ್ಟ್ರದ್ರೋಹಿ ಎಂದಿದ್ದರು ಕಾಂಗ್ರೆಸ್​​ನವರು. ಅವರಂತ ಮಹಾನ್ ಪುರುಷರನ್ನೂ ಕಾಂಗ್ರೆಸ್​ ನಿಂದಿಸಿದೆ, ಈ ಬಾರಿಯ ಮತ ಕರ್ನಾಟಕವನ್ನು ನಂಬರ್ 1 ಮಾಡಲು, ಅಮೃತ ಕಾಲಕ್ಕೆ ಕೊಡುಗೆ ನೀಡಲು ಎಂಬುದು ನೆನಪಿಡಿ. ನಿಮ್ಮ ಸೇವೆ ಮಾಡಲು ಆಶೀರ್ವಾದ ಮಾಡಿ. ಮೇ 10ರಂದು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಮತ ನೀಡಿ. ಕರ್ನಾಟಕದ ಜನರ ಸೇವೆ ಮಾಡಲು ಮತ್ತೊಮ್ಮೆ ಅವಕಾಶ ನೀಡಿ. ಹಗಲಿರುಳು ನಿಮ್ಮೆಲ್ಲರ ಸೇವೆಗೂ ನಾನು ಬದ್ಧನಾಗಿದ್ದೇನೆ. ನಿಮ್ಮ ಆಶೀರ್ವಾದದಿಂದ ಬೈಗುಳಗಳು ಮಣ್ಣಲ್ಲಿ ಮಣ್ಣಾಗುತ್ತೆ. ಎಷ್ಟು ಕೆಸರು ಎರಚುತ್ತಾರೋ ಅಷ್ಟು ಕಮಲ ಅರಳುತ್ತೆ. ನಿಮ್ಮ ಸೇವಕ ಮೋದಿಯಿಂದ ನಿಮಗೆಲ್ಲ ನಮಸ್ಕಾರಗಳು ಎಂದು ಪ್ರಧಾನಿ ಮೋದಿ ಹೇಳಿದರು.