ಬೆಂಗಳೂರು: ವಿಧಾನಸಭಾ ಚುನಾವಣೆಯ ಹೊಸ್ತಿಲಲ್ಲೇ ಕೋಲಾರ ಬಿಜೆಪಿ ಅಭ್ಯರ್ಥಿ ವರ್ತೂರು ಪ್ರಕಾಶ್ಗೆ ಬಂಧನ ಭೀತಿ ಎದುರಾಗಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಪ್ರಕಾಶ್ಗೆ ಬಂಧನ ವಾರಂಟ್ ಜಾರಿಯಾಗಿದೆ. ವರ್ತೂರು ಪ್ರಕಾಶ್ಗೆ ಸಾಕಷ್ಟು ಬಾರಿ ಸಮನ್ಸ್ ನೀಡಿದರು ಕೋರ್ಟಿಗೆ ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಆನೇಕಲ್ ಜೆಎಂಎಫ್ಸಿ ಕೋರ್ಟ್ ಬಂಧನದ ವಾರಂಟ್ ಜಾರಿ ಮಾಡಿದೆ. ಮೇ 10ನೇ ತಾರೀಖಿನ ವೇಳೆಗೆ ವರ್ತೂರು ಪ್ರಕಾಶ್ ಅವರನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಲು ಜಿಗಣಿ ಪೋಲೀಸರಿಗೆ ನ್ಯಾಯಾಧೀಶರು ತಾಕೀತು ಮಾಡಿದ್ದಾರೆ.