ಸ್ವಾರ್ಥಕ್ಕಾಗಿ ಪಕ್ಷ ಬಿಟ್ಟವರಿಗೆ ಬುದ್ದಿ ಕಲಿಸಿ

Advertisement

ಬೆಳಗಾವಿ: ರಾಜ್ಯ ಚುನಾವಣೆ ಬೇರೆ ಆದರೆ, ಅಥಣಿ ಚುನಾವಣೆಯೇ ಬೇರೆ ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಹೇಳಿದರು.
ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪೂರ್ಣ ರಾಜ್ಯದ ಚುನಾವಣೆ ಬೇರೆ ಆದರೆ, ಅಥಣಿ ಚುನಾವಣೆಯೇ ಬೇರೆಯಾಗಿದೆ. ಸ್ವಾರ್ಥಕ್ಕಾಗಿ ಪಕ್ಷ ಬಿಟ್ಟವರಿಗೆ ಚುನಾವಣೆಯಲ್ಲಿ ಬುದ್ದಿ ಕಲಿಸಿ. ರಾಜ್ಯದಲ್ಲಿ ಡಬಲ್‌ ಇಂಜಿನ್‌ ಸರಕಾರಕ್ಕಾಗಿ ಕಮಲದ ಗುರುತಿಗೆ ಮತ ಹಾಕಿ ಎಂದು ಮನವಿ ಮಾಡಿದರು.
ಇನ್ನು ಸ್ವಾತಂತ್ರ್ಯ ಸೇನಾನಿ ವೀರ್ ಸಾವರ್ಕರ್‌ ಅವರನ್ನು ಕಾಂಗ್ರೆಸ್ ಪಕ್ಷದವರು ಬೆಳಗಾವಿಯ ಹಿಂಡಲಗಾ ಜೈಲಿಗೆ ಹಾಕಿದ್ದರು. ಎರಡು ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಏಕೈಕ ಸ್ವಾತಂತ್ರ್ಯ ಹೋರಾಟಗಾರ ವೀರ್ ಸಾವರ್ಕರ್ ಆಗಿದ್ದಾರೆ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಸಾವರ್ಕರ್ ಅವರನ್ನು ಅಪಮಾನ ಮಾಡುತ್ತಾರೆ. ಹತ್ತು ಜನ್ಮ ಹುಟ್ಟಿಬಂದರೂ ಸಾವರ್ಕರ್‌ರಂತಹ ಬಲಿದಾನ ನೋಡಕ್ಕಾಗಲ್ಲ ಎಂದರು.