ಮಾಜಿ ಶಾಸಕರ ಮನೆಯಲ್ಲಿ ದರೋಡೆ

Advertisement

ಅಜ್ಜಂಪರ: ತರಿಕೇರೆಯ ಮಾಜಿ ಶಾಸಕ ಎಸ್​.ಎಂ. ನಾಗರಾಜ್ ಅವರ​ ಮನೆಯಲ್ಲಿ ದರೋಡೆ ನಡೆದಿರುವುದಾಗಿ ವರದಿಯಾಗಿದೆ. ಬಂದೂಕು ಹಾಗೂ ಮಚ್ಚಿನೊಂದಿಗೆ ಬಂದಿದ್ದ 13ಕ್ಕೂ ಹೆಚ್ಚು ದುಷ್ಕರ್ಮಿಗಳಿಂದ ದರೋಡೆ ನಡೆದಿದೆ.
ಅಜ್ಜಂಪುರ ತಾಲೂಕಿನ ಗಡಿಹಳ್ಳಿಯಲ್ಲಿರುವ ಎಸ್.ಎಂ ನಾಗರಾಜ್​​ ಅವರ ತೋಟದ ಮನೆಯಲ್ಲಿ ದರೋಡೆ ನಡೆದಿದ್ದು ಬಾಗಿಲು ಮುರಿದು ಒಳನುಗ್ಗಿದ ದುಷ್ಕರ್ಮಿಗಳು ಮನೆಯಲ್ಲಿದ್ದವರ ಮೇಲೆ ಹಲ್ಲೆ ನಡೆಸಿ 500 ಗ್ರಾಂ ಕ್ಕಿಂತ ಅಧಿಕ ಚಿನ್ನಾಭರಣ ಹಾಗೂ ಹಣವನ್ನು ದೋಚಿ ಪರಾರಿಯಾಗಿದ್ದಾರೆ.
ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದ್ದು, ಈ ಸಮಯದಲ್ಲಿ ದರೋಡೆ ನಡೆದಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಎಸ್ಪಿ ಉಮ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳ ಶೋಧಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಈ ದರೋಡೆಯು ಚುನಾವಣೆ ದ್ವೇಷಕ್ಕಾಗಿ ನಡೆದಿದೆಯೋ? ಅಥವಾ ಹಣಕ್ಕಾಗಿ ನಡೆದಿದೆಯೋ? ಎಂಬ ಪ್ರಶ್ನೆ ಹುಟ್ಟಿಕೊಂಡಿದ್ದು, ತನಿಖೆ ನಂತರ ಸತ್ಯಾಸತ್ಯತೆ ತಿಳಿದುಬರಲಿದೆ.