ಉಮೇಶ್​ ಕತ್ತಿ ಅಂತ್ಯಸಂಸ್ಕಾರದಲ್ಲಿ ಸಿಎಂ ಬೊಮ್ಮಾಯಿ ಭಾಗಿ..!

Advertisement

ಬೆಳಗಾವಿ: ಕೆಲ ಹೊತ್ತಿನಲ್ಲೇ ಬೆಳಗಾವಿಗೆ ಸಿಎಂ ಬೊಮ್ಮಾಯಿ ತೆರಳಲಿದ್ದು, ಉಮೇಶ್​ ಕತ್ತಿ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ.

ಸಂಜೆ 5 ಗಂಟೆ ನಂತರ ಅಂತ್ಯ ಸಂಸ್ಕಾರ ನಡೆಯಲಿದ್ದು, ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಿಎಂ ಬೊಮ್ಮಾಯಿ ತೆರಳಲಿದ್ದಾರೆ. ಅಲ್ಲಿಂದ ಬೆಲ್ಲದ ಬಾಗೇವಾಡಿಗೆ ಪ್ರಯಾಣ ಮಾಡುವ ಸಿಎಂ, ಸಂಜೆ ಉಮೇಶ್​ ಕತ್ತಿ ಅಂತ್ಯಕ್ರಿಯೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ. ಆನಂತರ ಬೆಂಗಳೂರಿಗೆ ವಾಪಸ್ ಆಗಲಿd್ದಾರೆ. ಸದ್ಯ ಗೃಹ ಕಚೇರಿ ಕೃಷ್ಣಾದಲ್ಲಿರುವ ಸಿಎಂ ಬೊಮ್ಮಾಯಿ, ಕೇಂದ್ರ ವಿಪತ್ತು ನಿರ್ವಹಣಾ ತಂಡದ ಜತೆ ಭೇಟಿಯಾಗಲಿದ್ದಾರೆ. ಆನಂತರ ಬೆಳಗಾವಿಗೆ ಪ್ರಯಾಣ ಮಾಡಲಿದ್ದಾರೆ.