ಆಸ್ತಿ ವಿಚಾರ: ತಮ್ಮನಿಂದಲೇ ಅಣ್ಣನ ಹತ್ಯೆ

Advertisement

ದಾವಣಗೆರೆ: ಆಸ್ತಿ ವಿಚಾರಕ್ಕಾಗಿ ಸಹೋದರಿಬ್ಬರ ನಡುವೆ ನಡೆದ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಹರಿಹರ ನಗರದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಆಸ್ತಿ ವಿಚಾರವಾಗಿ ಸಹೋದರಿಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ವಿಷಯ ವಿಕೋಪಕ್ಕೆ ಹೋದಾಗ ಅಣ್ಣನನ್ನು ತಮ್ಮನೇ ಚಾಕುನಿಂದ ಚುಚ್ಚಿ ಭೀಕರ ಕೊಲೆ ಮಾಡಿದ್ದು, ಪ್ರಶಾಂತ ನಗರದ ನಿವಾಸಿ ಕೆ.ಜಿ ಕುಮಾರ (31) ಕೊಲೆಯಾದ ದುರ್ದೈವಿ.
ಹರಿಹರದ ಗುಂಡಪ್ಪ ಎಂಬುವರಿಗೆ ಇಬ್ಬರು ಪತ್ನಿಯರಿದ್ದು ನಗರದ ಭರಂಪುರ ನಿವಾಸಿ ಎರಡನೇ ಪತ್ನಿ ರತ್ನಮ್ಮನ ಪುತ್ರ ರಾಜು ಹಾಗೂ ಮೊದಲನೇ ಪತ್ನಿ ಲಕ್ಷಮ್ಮ ಕೊನೆಯ ಮಗನಾದ ಕುಮಾರ್ ನಡುವೆ ಆಸ್ತಿ ವಿಚಾರದಲ್ಲಿ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿತ್ತು. ಇದೇ ವಿಚಾರವಾಗಿ ಇವರಿಬ್ಬರ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು.
ಭಾನುವಾರ ರಾತ್ರಿ ದಾವಣಗೆರೆಯಿಂದ ಹರಿಹರಕ್ಕೆ ವಾಪಸ್ ಬರುತ್ತಿರುವ ಮಾರ್ಗ ಮಧ್ಯೆ ಕುಮಾರ್ ಮೇಲೆ ತಮ್ಮ ರಾಜು ಮತ್ತು ಮಾರುತಿ ಎಂಬುವವರು ಹಲ್ಲೆ ಮಾಡಿದ್ದಾರೆ. ಕೂಡಲೇ ಕುಮಾರ್‌ನನ್ನು ಹರಿಹರ ಆಸ್ಪತ್ರೆಗೆ ಕರೆತರಲಾಗಿತ್ತು. ಆಸ್ಪತ್ರೆಯಲ್ಲಿಯೇ ಮತ್ತೆ ಕುಮಾರ್ ಮೇಲೆ ರಾಜು ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದ್ದಾನೆ. ತೀವ್ರವಾಗಿ ರಕ್ತಸ್ರಾವಗೊಂಡ ಕುಮಾರ್ ಅವರನ್ನು ದಾವಣಗೆರೆಗೆ ಕರೆತರುವಾಗ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ.