ಡಿ.ಕೆ. ಶಿವಕುಮಾರ ದೆಹಲಿ ಪ್ರವಾಸ ರದ್ದುಪಡಿಸಿದ್ದಾರೆ. ಇಂದು ಸಂಜೆ ದೆಹಲಿಗೆ ತೆರಳಬೇಕಿದ್ದ ಡಿ.ಕೆ. ಶಿವಕುಮಾರ ದಿಢೀರ್ ಪ್ರವಾಸ ರದ್ದು ಮಾಡಿದ್ದಾರೆ.
ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಭಾರೀ ಫೈಟ್ ನಡೆದಿದ್ದು, ದೆಹಲಿಯಲ್ಲಿ ಹೈಕಮಾಂಡ್ ಸಭೆ ನಡೆಸಿದ್ದಾರೆ. ಆದರೆ, ಡಿ.ಕೆ. ಶಿವಕುಮಾರ್, ನನಗೆ ಹೊಟ್ಟೆಯಲ್ಲಿ ಸಮಸ್ಯೆಯಿದೆ. ವೈದ್ಯರು ಬರುತ್ತಾರೆ, ಸ್ವಲ್ಪ ಜ್ವರ ಕೂಡ ಬಂದಿದೆ. ಸ್ವಲ್ಪ ನನ್ನನ್ನೂ ಫ್ರೀ ಬಿಟ್ಟರೆ ಸಾಕು ಎಂದು ಹೇಳಿದ್ದಾರೆ.